ಬಂಟ್ವಾಳ

ಬಂಟ್ವಾಳ ತಾಲೂಕಿನ ಕ್ಲಿನಿಕ್‌ಗಳು ಬಂದ್

www.bantwalnews.com ವರದಿ

ವೈದ್ಯವೃತ್ತಿಗೆ ಸಂಬಂಧಿಸಿ ರಾಜ್ಯ ಸರಕಾರ ತರಲಿರುವ ಮಸೂದೆಯನ್ನು ವಿರೋಧಿಸಿ ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ವೈದ್ಯರು ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಂಟ್ವಾಳ ತಾಲೂಕಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.

ಜಾಹೀರಾತು

ಸಾಮಾನ್ಯವಾಗಿ ಈ ಅವಧಿಯಲ್ಲಿ ಮುಷ್ಕರ ಇಲ್ಲದೇ ಇದ್ದರೂ ಪೇಷಂಟ್ ಗಳ ಸಂಖ್ಯೆ ಕಡಿಮೆ. ಹೆರಿಗೆ ಮತ್ತು ತುರ್ತುಸಂದರ್ಭದ ಪ್ರಕರಣಗಳನ್ನು ಬಿಟ್ಟರೆ ಅಪಾಯಕಾರಿಯಾದ ಸನ್ನಿವೇಶಗಳು ಇಲ್ಲಿ ನಿರ್ಮಾಣವಾಗಿಲ್ಲ. ಆದರೆ ಚಾರಿಟೇಬಲ್ ಆಸ್ಪತ್ರೆ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿಲ್ಲವಾದ ಕಾರಣ ತಾಲೂಕಿನ ಏಕೈಕ ಚಾರಿಟೇಬಲ್ ಆಸ್ಪತ್ರೆ ತುಂಬೆ ಆಸ್ಪತ್ರೆಯಲ್ಲಿ ಎಂದಿಗಿಂತ ಹೆಚ್ಚು ರೋಗಿಗಳು ಕಂಡುಬಂದರು.

ಐಎಂಎ ಬೆಂಬಲಿಸಿ ಆಯುಷ್, ಡೆಂಟಲ್, ಹೋಮಿಯೋಪಥಿ ವೈದ್ಯರೂ ಮುಷ್ಕರ ಹೂಡಿದ್ದು, ತಾಲೂಕಿನಲ್ಲಿರುವ ಕ್ಲಿನಿಕ್ ಗಳು ಬಂದ್ ಆಚರಿಸಿದವು. ಮುಷ್ಕರ ಇಲ್ಲದಿದ್ದರೂ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕಿನ ರೋಗಿಗಳು ಮಂಗಳೂರು ಮತ್ತು ದೇರಳಕಟ್ಟೆಯನ್ನು ಅವಲಂಬಿಸುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಮುಷ್ಕರಕ್ಕೆ ಸಂಬಂಧಿಸಿ ಗಂಭೀರ ಪರಿಣಾಮಗಳು ಉಂಟಾಗಿಲ್ಲ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ