ವಿಟ್ಲ

ವಿಟ್ಲ ರಾಯರಬೆಟ್ಟು ನಿವಾಸಿ ಸಾವು

ವಿಟ್ಲಕಸಬಾ ಗ್ರಾಮದ ರಾಯರಬೆಟ್ಟು ನಿವಾಸಿ, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೋರ್ವ ಶುಕ್ರವಾರ ಸಾವನ್ನಪ್ಪಿದ್ದಾರೆ.

ರಾಯರಬೆಟ್ಟು ರುಕ್ಮ ಪೂಜಾರಿ ಅವರ ಪುತ್ರ ರಜತ್‌ರಾಜ್(27) ಅವರು ಮೃತಪಟ್ಟ ಯುವಕ. ಈತ ಕಳೆದ ಒಂದೂವರೆ ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಗುರುವಾರ ಮತ್ತೆ ಅನಾರೋಗ್ಯ ಕಾಡಿದೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ 108ರಲ್ಲಿ ಕರೆದೊಯ್ದು ದಾಖಲಿಸಲಾಗಿತ್ತು.

ಜಾಹೀರಾತು

ಆದರೆ ಅದಕ್ಕೆ ಸಂಬಂಧಪಟ್ಟ ಚಿಕಿತ್ಸೆ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವೈದ್ಯರು ತಿಳಿಸಿದ್ದರು. ರಾತ್ರಿ ತೀವ್ರ ಅನಾರೋಗ್ಯ ಕಾಡಿದಾಗ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ನೀಡಿದರೂ ಶುಕ್ರವಾರ ಬೆಳಗ್ಗೆ ಗಂಟೆ 10.50 ಕ್ಕೆ ಮೃತಪಟ್ಟರು. ರಜತ್‌ರಾಜ್ ಅವಿವಾಹಿತನಾಗಿದ್ದು, ತಂದೆ, ತಾಯಿ ಮತ್ತು ಹಿರಿಯ ಸಹೋದರನನ್ನು ಅಗಲಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ