ಬೀದಿನಾಯಿ ಕಡಿದು ಗರ್ಭಿಣಿ ಆಸ್ಪತ್ರೆಗೆ ದಾಖಲು

www.bantwalnews.com

ಜಾಹೀರಾತು

ಎರಡು ದಿನಗಳ ಹಿಂದೆಯಷ್ಟೇ ಮಹಿಳೆಯೋರ್ವರಿಗೆ ಬೀದಿ ನಾಯಿ ಕಚ್ಚಿದ ಘಟನೆ ಇನ್ನೂ ಹಸಿರಾಗಿರುವಂತೆಯೇ ಬಂಟ್ವಾಳದಲ್ಲಿ ಮತ್ತೆ ಬೀದಿನಾಯಿಗಳ ಆರ್ಭಟ ಮುಂದುವರಿದಿದೆ. ಗರ್ಭಿಣಿಯೋರ್ವರು ಹಾಗೂ ಶಾಲಾ ಬಾಲಕನೊಬ್ಬನಿಗೆ ಬೀದಿನಾಯಿಗಳು ಕಚ್ಚಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಭಂಡಾರಿಬೆಟ್ಟುವಿನ ಗರ್ಭಿಣಿ ಭಾರತಿ ಹಾಗೂ ಶಾಲಾ ಬಾಲಕ ಕೌಶಿಕ್ ಎಂಬವರಿಗೆ ಭಂಡಾರಿಬೆಟ್ಟುವಿನಲ್ಲಿ ಬೀದಿ ನಾಯಿ ಕಚ್ಚಿದೆ. ಗಾಯಾಳು ಗರ್ಭಿಣಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಫತ್ರೆಗೆ ದಾಖಲಿಸಲಾಗಿದ್ದರೆ ಕೌಶಿಕ್ ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋಡಿಸಲಾಗಿದೆ. ಇದೇ ಸ್ಥಳದಲ್ಲಿ ಹೇಮಾವತಿ ಎಂಬ ಮಹಿಳೆಗೆ ಬೀದಿ ನಾಯಿ ಕಡಿದಿತ್ತು. ಬೀದಿನಾಯಿ ನಿಯಂತ್ರಣ ಕುಜರಿತು ಪುರಸಭಾ ಸದಸ್ಯ ಜಗದೀಶ ಕುಂದರ್ ಪುರಸಭೆಗೆ ಒತ್ತಾಯಿಸಿದ್ದು, ಅದರಂತೆ ನಿಯಂತ್ರಣ ಕಾರ್ಯ ಆರಂಭಗೊಂಡಿದೆ ಎಂದು ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ www.bantwalnews.com ಗೆ ತಿಳಿಸಿದ್ದಾರೆ.

ಮಂಗಳೂರಿನ ಆನಿಮಲ್ ಕೇರ್ ಟ್ರಸ್ಟ್ ನವರ ಸಹಯೋಗದಿಂದ ಪುರಸಭೆ ವ್ಯಾಪ್ತಿಯ ಬೀದಿನಾಯಿಗಳನ್ನು ಹಿಡಿದು, ಅವುಗಳನ್ನು ಮಂಗಳೂರಿಗೆ ಕೊಂಡುಹೋಗಿ, ಸಂತಾನಶಕ್ತಿ ಹರಣ ಮಾಡಿ, ರೇಬಿಸ್ ಬಾರದಂತೆ ಚುಚ್ಚುಮದ್ದು ನೀಡಿ, ಅವನ್ನು ಎಲ್ಲಿ ಹಿಡಿಯಲಾಗಿದೆಯೋ ಅಲ್ಲೇ ತಂದು ಬಿಡುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಬೀದಿನಾಯಿಗಳಿಗೆ ತೊಂದರೆ ಉಂಟುಮಾಡಬಾರದು ಎಂಬ ನಿಯಮಪಾಲನೆಯನ್ನು ಮಾಡುವುದರ ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗಬಾರದು ಎಂಬ ಕಾಳಜಿಯಿಂದ ಆಡಳಿತ ಕಾರ್ಯಪ್ರವೃತ್ತವಾಗಬೇಕು. ಹೀಗಾಗಿ ನಿಯಂತ್ರಣ ಎಂಬುದು ಹಗ್ಗದ ಮೇಲಿನ ನಡಿಗೆಯಂತೆ. ಇದಕ್ಕೆ ಆಡಳಿತ ಮತ್ತು ಜನರ ಬೆಂಬಲ ಎರಡೂ ಅಗತ್ಯ.

ಜಾಹೀರಾತು

ಬೀದಿನಾಯಿ ನಿಯಂತ್ರಣಕ್ಕೆ ಆಡಳಿತ ಮತ್ತು ಜನರು ಒಟ್ಟಾಗಿ ಮುನ್ನಡೆಯಬೇಕು. ಹಾಗಿದ್ದಾಗಲಷ್ಟೇ ನಿಯಂತ್ರಣ ಸಾಧ್ಯ. ಇದಕ್ಕೆ ಏನು ಮಾಡಬಹುದು ಎಂಬ ವಿಚಾರವಾಗಿ ಬರೆಯಿರಿ: bantwalnews@gmail.com

ಪುರಸಭೆ ಬೀದಿನಾಯಿ ಹಾವಳಿ ಕುರಿತು ಬಂಟ್ವಾಳನ್ಯೂಸ್ ವಿಶೇಷ ವರದಿ ಮೂಲಕ ಗಮನ ಸೆಳೆದಿತ್ತು. ಅವುಗಳ ಲಿಂಕ್ ಇಲ್ಲಿವೆ.

ನಡೆದುಕೊಂಡು ಹೋಗುವವರೇ , ನಾಯಿಗಳಿವೆ ಹುಷಾರು!

ಜಾಹೀರಾತು

ನಾಯಿಗಳಿವೆ … ಎಚ್ಚರಿಕೆ!!!

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೀದಿನಾಯಿ ಕಡಿದು ಗರ್ಭಿಣಿ ಆಸ್ಪತ್ರೆಗೆ ದಾಖಲು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*