ಬಂಟ್ವಾಳ

ಬೀದಿನಾಯಿ ಕಡಿದು ಗರ್ಭಿಣಿ ಆಸ್ಪತ್ರೆಗೆ ದಾಖಲು

www.bantwalnews.com

ಜಾಹೀರಾತು

ಎರಡು ದಿನಗಳ ಹಿಂದೆಯಷ್ಟೇ ಮಹಿಳೆಯೋರ್ವರಿಗೆ ಬೀದಿ ನಾಯಿ ಕಚ್ಚಿದ ಘಟನೆ ಇನ್ನೂ ಹಸಿರಾಗಿರುವಂತೆಯೇ ಬಂಟ್ವಾಳದಲ್ಲಿ ಮತ್ತೆ ಬೀದಿನಾಯಿಗಳ ಆರ್ಭಟ ಮುಂದುವರಿದಿದೆ. ಗರ್ಭಿಣಿಯೋರ್ವರು ಹಾಗೂ ಶಾಲಾ ಬಾಲಕನೊಬ್ಬನಿಗೆ ಬೀದಿನಾಯಿಗಳು ಕಚ್ಚಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಭಂಡಾರಿಬೆಟ್ಟುವಿನ ಗರ್ಭಿಣಿ ಭಾರತಿ ಹಾಗೂ ಶಾಲಾ ಬಾಲಕ ಕೌಶಿಕ್ ಎಂಬವರಿಗೆ ಭಂಡಾರಿಬೆಟ್ಟುವಿನಲ್ಲಿ ಬೀದಿ ನಾಯಿ ಕಚ್ಚಿದೆ. ಗಾಯಾಳು ಗರ್ಭಿಣಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಫತ್ರೆಗೆ ದಾಖಲಿಸಲಾಗಿದ್ದರೆ ಕೌಶಿಕ್ ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋಡಿಸಲಾಗಿದೆ. ಇದೇ ಸ್ಥಳದಲ್ಲಿ ಹೇಮಾವತಿ ಎಂಬ ಮಹಿಳೆಗೆ ಬೀದಿ ನಾಯಿ ಕಡಿದಿತ್ತು. ಬೀದಿನಾಯಿ ನಿಯಂತ್ರಣ ಕುಜರಿತು ಪುರಸಭಾ ಸದಸ್ಯ ಜಗದೀಶ ಕುಂದರ್ ಪುರಸಭೆಗೆ ಒತ್ತಾಯಿಸಿದ್ದು, ಅದರಂತೆ ನಿಯಂತ್ರಣ ಕಾರ್ಯ ಆರಂಭಗೊಂಡಿದೆ ಎಂದು ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ www.bantwalnews.com ಗೆ ತಿಳಿಸಿದ್ದಾರೆ.

ಮಂಗಳೂರಿನ ಆನಿಮಲ್ ಕೇರ್ ಟ್ರಸ್ಟ್ ನವರ ಸಹಯೋಗದಿಂದ ಪುರಸಭೆ ವ್ಯಾಪ್ತಿಯ ಬೀದಿನಾಯಿಗಳನ್ನು ಹಿಡಿದು, ಅವುಗಳನ್ನು ಮಂಗಳೂರಿಗೆ ಕೊಂಡುಹೋಗಿ, ಸಂತಾನಶಕ್ತಿ ಹರಣ ಮಾಡಿ, ರೇಬಿಸ್ ಬಾರದಂತೆ ಚುಚ್ಚುಮದ್ದು ನೀಡಿ, ಅವನ್ನು ಎಲ್ಲಿ ಹಿಡಿಯಲಾಗಿದೆಯೋ ಅಲ್ಲೇ ತಂದು ಬಿಡುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಬೀದಿನಾಯಿಗಳಿಗೆ ತೊಂದರೆ ಉಂಟುಮಾಡಬಾರದು ಎಂಬ ನಿಯಮಪಾಲನೆಯನ್ನು ಮಾಡುವುದರ ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗಬಾರದು ಎಂಬ ಕಾಳಜಿಯಿಂದ ಆಡಳಿತ ಕಾರ್ಯಪ್ರವೃತ್ತವಾಗಬೇಕು. ಹೀಗಾಗಿ ನಿಯಂತ್ರಣ ಎಂಬುದು ಹಗ್ಗದ ಮೇಲಿನ ನಡಿಗೆಯಂತೆ. ಇದಕ್ಕೆ ಆಡಳಿತ ಮತ್ತು ಜನರ ಬೆಂಬಲ ಎರಡೂ ಅಗತ್ಯ.

ಬೀದಿನಾಯಿ ನಿಯಂತ್ರಣಕ್ಕೆ ಆಡಳಿತ ಮತ್ತು ಜನರು ಒಟ್ಟಾಗಿ ಮುನ್ನಡೆಯಬೇಕು. ಹಾಗಿದ್ದಾಗಲಷ್ಟೇ ನಿಯಂತ್ರಣ ಸಾಧ್ಯ. ಇದಕ್ಕೆ ಏನು ಮಾಡಬಹುದು ಎಂಬ ವಿಚಾರವಾಗಿ ಬರೆಯಿರಿ: bantwalnews@gmail.com

ಪುರಸಭೆ ಬೀದಿನಾಯಿ ಹಾವಳಿ ಕುರಿತು ಬಂಟ್ವಾಳನ್ಯೂಸ್ ವಿಶೇಷ ವರದಿ ಮೂಲಕ ಗಮನ ಸೆಳೆದಿತ್ತು. ಅವುಗಳ ಲಿಂಕ್ ಇಲ್ಲಿವೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts