ಎಲ್ಲರನ್ನೂ ಒಗ್ಗೂಡಿಸಲು ಸಂಗೀತದಿಂದ ಸಾಧ್ಯ: ದೇರ್ಲ

www.bantwalnews.com

  • ಸ್ವರಮಾಲಾ ಸಂಗೀತದ ತಿಂಗಳ ಸರಣಿ ಕಾರ್ಯಕ್ರಮ

ಜಾಹೀರಾತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ಸಂಜೆ ನಡೆದ ಕೊಂಬೆಟ್ಟು ಸಾಧನಾ ಸಂಗೀತ ವಿದ್ಯಾಲಯದ ಸ್ವರಮಾಲ ತಿಂಗಳ ಸರಣಿ ಕಾರ್ಯಕ್ರಮ ನಡೆಯಿತು.

ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಮುಖ್ಯ ಅತಿಥಿಯಾಗಿ ಮಾತನಾಡಿ, ಮೇಲ್ನೊಟಕ್ಕೆ ಸಂಗೀತ ಕೊರಳಿನಿಂದ ಹೊರಡುತ್ತದೆ. ಆದರೆ ಇದು ಕರಳಿನಿಂದ ಹೊರಬಂದಾಗ ಸಂಗೀತಕ್ಕೆ ಹೆಚ್ಚು ಅರ್ಥ ಬರುತ್ತದೆ. ಇಂತಹ ಧ್ಯಾನದಿಂದ ಸೃಷ್ಟಿಯಾಗುವ ಕವನವನ್ನು ಧ್ಯಾನದಿಂದಲೇ ಓದಬೇಕು. ಕಾವ್ಯದ ನಿಜವಾದ ಅದ್ಭುತ ಶಕ್ತಿ ಕರುಳಿನಿಂದ ಹೊರಬಂದ ಸಂಗೀತದಲ್ಲಿ ಇರುತ್ತದೆ. ಸಂಸ್ಕಾರ, ಸಂಸ್ಕೃತಿ, ಜಾತಿ, ಪಂಗಡದ ಬೇಧವಿಲ್ಲದೆ ಎಲ್ಲವನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಂಗೀತಕ್ಕೆ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಧನಾ ಸಂಗೀತ ವಿದ್ಯಾಲಯದ ಗುರು ವಿದುಷಿ ಸುಚಿತ್ರಾ ಹೊಳ್ಳ ಮಾತನಾಡಿ, ಉತ್ತಮ ಕಂಠ, ಸಾಹಿತ್ಯದ ಅರ್ಥ, ವಾಗ್ಗೆಯಕಾರರ ತಿಳುವಳಿಕೆ, ಅವರ ಕ್ಷೇತ್ರದ ಮತ್ತು ಕೃತಿಯ ಒಳಾರ್ಥ ತಿಳಿದರೆ ಸಂಗೀತವೂ ಉತ್ತಮ ರೀತಿಯಲ್ಲಿ ಮೂಡಿ ಬರುತ್ತದೆ ಎಂದರು.

ಸಾಧನಾ ಸಂಗೀತ ಶಾಲೆಯ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಈಶ್ವರ್ ಬೇಡೆಕರ್ ಉಪಸ್ಥಿತರಿದ್ದರು. ವೈಷ್ಣವಿ ಆಚಾರ್ಯ ಅತಿಥಿಗಳನ್ನು ಪರಿಚಯಿಸಿದರು. ವೈಷ್ಣವಿ ರೈ ಪ್ರಾರ್ಥಿಸಿದರು. ವಿಶಾಕ್ ಸ್ವಾಗತಿಸಿ, ಪ್ರಥಮ ಉಪಾಧ್ಯಾಯ ವಂದಿಸಿದರು. ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನಡೆದ ಕಾರ್ಯಕ್ರಮದಲ್ಲಿ ವೈಷ್ಣವಿ ಮಾಂಬಾಡಿ, ಪಲ್ಲವಿ ಭಟ್, ಶೈಲಾ ಸದಾನಂದ ಭಟ್, ಸುಮನಾ ಪ್ರಶಾಂತ್ ಕಾರ್ಯಕ್ರಮ ನಡೆಸಿಕೊಟ್ಟರು. ಪಿಟೀಲಿನಲ್ಲಿ ವಿದ್ವಾನ್ ಜಗದೀಶ್ ಕೊರೆಕ್ಕಾಣ, ಮೃದಂಗದಲ್ಲಿ ಮುರಳಿಕೃಷ್ಣ ಕುಕ್ಕಿಲ ಸಹಕರಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಲ್ಲರನ್ನೂ ಒಗ್ಗೂಡಿಸಲು ಸಂಗೀತದಿಂದ ಸಾಧ್ಯ: ದೇರ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*