ಲಯನ್ಸ್ ನಿಂದ ನಿರ್ಮಲ ಹೃದಯದಲ್ಲೊಂದು ದಿನ


ಲಯನ್ಸ್ ಕ್ಲಬ್ ಹಾಗೂ ಲಯನೆಸ್ ಕ್ಲಬ್ ಬಂಟ್ವಾಳ ಹಾಗೂ ಲಯನ್ಸ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ನಿರ್ಮಲ ಹೃದಯದಲ್ಲೊಂದು ದಿನ ಎನ್ನುವ ವಿಶೇಷ ಕಾರ್ಯಕ್ರಮ ಬುಧವಾರ ನಡೆಯಿತು.

ಲಯನ್ಸ್ ಕ್ಲಬ್‌ನ ಫಿಸಿಯೋಥೆರಪಿ ಕೇಂದ್ರದ ಮಕ್ಕಳೊಂದಿಗೆ ಬೆರೆಯುವ ಈ ವಿಶೇಷ ಕಾರ್ಯಕ್ರಮವನ್ನು ಕ್ಲಬ್‌ನ ಸ್ಥಾಪಕಾಧ್ಯಕ್ಷ ಡಾ ವಸಂತ ಬಾಳಿಗ ಉದ್ಘಾಟಿಸಿದರು.

ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ವಸಂತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಏಳು ವರ್ಷಗಳ ಹಿಂದೆ ಈ ಕಾರ್ಯಕ್ರಮವನ್ನು ಆಯೋಜಿಸುವಾಗ ಇಷ್ಟು ವಿಶಿಷ್ಟವಾಗಿ ಮೂಡಿ ಬರುತ್ತದೆ ಎನ್ನುವ ನಿರೀಕ್ಷೆ ಇರಲಿಲ್ಲ. ಆದರೆ ಲಯನ್ಸ್ ಕ್ಲಬ್‌ನ ದಾಮೋದರ್ ಬಿ.ಎಂ. ಹಾಗೂ ದೇವಿಕ ಅವರ ಮುತುವರ್ಜಿಯಿಂದ ಈ ಕಾರ್ಯಕ್ರಮ ಯಶಸ್ಸನ್ನು ಕಂಡಿದೆ ಎಂದರು.

ಜಾಹೀರಾತು

ಲಯನ್ಸ್ ಕ್ಲಬ್‌ನ ಪ್ರಮುಖರಾದ ನವನೀತ್ ಶೆಟ್ಟಿ ಕದ್ರಿ, ಸೇಸಪ್ಪ ಕೋಟ್ಯಾನ್, ಅಧ್ಯಕ್ಷ ಜಗದೀಶ ಎಡಪಡಿತ್ತಾಯ ಮತ್ತಿತರ ಪ್ರಮುಖರು ಹಾಜರಿದ್ದರು. ಈ ಸಂದರ್ಭ ದಾಮೋದರ್ ಹಾಗೂ ಫಿಸಿಯೋ ಥೆರಪಿ ಕೇಂದ್ರದ ವಿದ್ಯಾರ್ಥಿನಿ ಜನ್ಮದಿನವನ್ನು ಆಚರಿಸಲಾಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಯನ್ಸ್ ನಿಂದ ನಿರ್ಮಲ ಹೃದಯದಲ್ಲೊಂದು ದಿನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*