25ರಂದು ಡಾ. ಎಂ.ಎನ್.ರಾಜೇಂದ್ರಕುಮಾರ್, ಕೆ.ರವಿರಾಜ ಹೆಗ್ಡೆ ಅಭಿವಂದನೆ

www.bantwalnews.com

ಜಾಹೀರಾತು

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಸಭಾಂಗಣದಲ್ಲಿ ನ.25ರಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮತ್ತು ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ ಅಭಿವಂದನಾ ಕಾರ್ಯಕ್ರಮ ನಡೆಯಲಿದೆ.

ಈ ವಿಷಯವನ್ನು ಎಸ್ ಸಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಬುಧವಾರ ಸಂಜೆ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿಮಿತ್ತ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಮತ್ತು ರಾಷ್ಟ್ರೀಯ ಡೈರಿ ಎಕ್ಸಲೆನ್ಸಿ ಪ್ರಶಸ್ತಿ ಪುರಸ್ಕೃತ ಕೆ.ರವಿರಾಜ ಹೆಗ್ಡೆಯವರ ಸಾಧನೆಯನ್ನು ಗುರುತಿಸಲಾಗುವುದು. ಬಂಟ್ವಾಳ ತಾಲೂಕು ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳು ಮತ್ತು ಸಮಸ್ತ ಸಹಕಾರಿಗಳ ಬಂಧುಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯುವುದು ಎಂದು ಭಟ್ ತಿಳಿಸಿದರು.

ಜಾಹೀರಾತು

ಮಧ್ಯಾಹ್ನ 2.30 ಗಂಟೆಗೆ ಈ ಸಮಾರಂಭ ನಡೆಯಲಿದೆ. ಸಂಸದ ನಳೀನ್ ಕುಮಾರ್ ಕಟೀಲ್ ಅವರು ಇವರಿಬ್ಬರನ್ನು ಅಭಿವಂದಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಸಚಿವ ಯು.ಟಿ.ಖಾದರ್, ಶಾಸಕಿ ಶಕುಂತಳಾ ಶೆಟ್ಟಿ ಸಹಿತ ಹಿರಿಯ ಸಹಕಾರಿಗಳು, ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಸುದರ್ಶನ್ ಜೈನ್, ಜಿ.ಆನಂದ, ರವೀಂದ್ರ ಕಂಬಳಿ, ಗಣೇಶ್ ಕಾರಂತ, ಸುಧಾಕರ ಶೆಟ್ಟಿ, ಆನಂದ.ಪಿ., ಈಶ್ವರ ನಾಯ್ಕ್, ಯೋಗೀಶ್ ಎಚ್ ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "25ರಂದು ಡಾ. ಎಂ.ಎನ್.ರಾಜೇಂದ್ರಕುಮಾರ್, ಕೆ.ರವಿರಾಜ ಹೆಗ್ಡೆ ಅಭಿವಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*