ಬಂಟ್ವಾಳ

ಲಾರಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

www.bantwalnews.com REPORT FOLLOW UP

ಗುರುವಾರ ಬೆಳಗ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಕುರಿತು www.bantwalnews.comನಲ್ಲಿ ವರದಿ ಪ್ರಕಟಗೊಂಡಿತ್ತು. ಅದರ ಮತ್ತಷ್ಟು ವಿವರಗಳು ಇಲ್ಲಿವೆ.

ಜಾಹೀರಾತು

ಬೆಳಗ್ಗೆ ಗ್ಯಾಸ್ ಸಾಗಾಟದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಸ್ಕೂಟರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳನ್ನು ಶಿವಮೊಗ್ಗ ಮೂಲದ ಮೌಲಾನಾ (22) ಹಾಗೂ ಇಲ್ಲಿನ ವಾಮದಪದವು ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಇವರಿಬ್ಬರು ಮಣಿಪಾಲ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮಾಲಕನ ಮದುವೆಗೆಂದು ಬಿ.ಸಿ.ರೋಡಿನತ್ತ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ .

ಇಬ್ಬರು ಗಾಯಾಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದದಿಂದ ಬಿ.ಸಿ.ರೋಡಿನಲ್ಲಿ ಕೆಲ ಹೊತ್ತು ಸಂಚಾರ ಅಡಚಣೆ ಉಂಟಾಗಿತ್ತು.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.