ಸಾರ್ವಜನಿಕ ವಿತರಣೆಗೆಂದು ಮೀಸಲಿರಿಸಲಾಗಿದ್ದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಪೊಲೀಸರು ಮತ್ತು ಆಹಾರ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಬಿ.ಸಿ.ರೋಡಿನ ಶಾಂತಿಯಂಗಡಿ ಸಮೀಪ ವಶಪಡಿಸಿಕೊಂಡಿದ್ದಾರೆ.
ಎಎಸ್ಪಿ ಡಾ.ಅರುಣ್ ನೇತೃತ್ವದಲ್ಲಿ ಪೊಲೀಸ್ ತಂಡ ಈ ದಾಳಿಯನ್ನು ನಡೆಸಿದ್ದು, ಹಾಸನದಿಂದ ಕೇರಳ ಕಡೆಗೆ ಅಕ್ರಮವಾಗಿ ಅಕ್ಕಿಯನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಈ ಸಂಬಂಧ ಮೂರು ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 200 ಬ್ಯಾಗುಗಳಲ್ಲಿ 100 ಕ್ವಿಂಟಲ್ ಅಕ್ಕಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಕ್ಕಿ ಅಕ್ರಮ ಸಾಗಾಟ ಪತ್ತೆ"