ಆರಾಧನೆ

ಹರಿದ್ವಾರದಲ್ಲಿ ಕನ್ಯಾಡಿ ಕ್ಷೇತ್ರದ ಸಾಧನಾ ಕುಟೀರ ಉದ್ಘಾಟನೆ

www.bantwalnews.com

 

ಜಾಹೀರಾತು

ಚಿತ್ರಗಳು: ಸಂದೀಪ್ ಸಾಲ್ಯಾನ್


ಹರಿದ್ವಾರದಲ್ಲಿ ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಾಧನಾ ಕುಟೀರವನ್ನು ಕೇಂದ್ರ ಅಂಕಿ ಅಂಶ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಿದರು.

ಕನ್ಯಾಡಿ ಶ್ರೀ ಜಗದ್ಗುರು ಪೀಠದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಬಿಲ್ಲಾಡಿ, ಭಟ್ಕಳ, ಕೆರಿಕ್ಕಲ್, ಹೊನ್ನಾವರ, ಹರಿದ್ವಾರಗಳ ಶಾಖೆಗಳನ್ನು ಹೊಂದಿರುವ ಕನ್ಯಾಡಿ ಜಗದ್ಗುರು ಪೀಠಾಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅವರ ಗುರು ಶ್ರೀ ಆತ್ಮಾನಂದ ಸರಸ್ವತಿ ಮಾರ್ಗದರ್ಶನದಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಉಚಿತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಭಾರತೀಯ ಪರಂಪರೆಗಳನ್ನು ಎಳವೆಯಲ್ಲೇ ಒದಗಿಸುವ ಮಹತ್ವದ ಕಾರ್ಯ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಹರಿದ್ವಾರದಲ್ಲಿ ಶಾಖೆ ಆರಂಭಗೊಂಡಿದೆ.

ದ.ಕ, ಉಡುಪಿ, ಉ.ಕ. ಸಹಿತ ರಾಜ್ಯದ ನಾನಾ ಕಡೆಗಳಿಂದ ಹಾಗೂ ದೇಶದ ಹಲವು ಭಾಗಗಳಿಂದ ಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.