ಪುಂಜಾಲಕಟ್ಟೆ

ಹೊಕ್ಕಾಡಿಗೋಳಿಯಲ್ಲಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

www.bantwalnews.com

ಜಾಹೀರಾತು

ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುವಲ್ಲಿ ನಮಗೆಲ್ಲರಿಗೂ ಮಹತ್ವರ ಜವಾಬ್ದಾರಿಯಿದೆ ಎಂದು ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಹೇಳಿದರು.

ಬಂಟ್ವಾಳ-ಬೆಳ್ತಂಗಡಿ ತಾಲೂಕಿನ ಗಡಿಭಾಗದಲ್ಲಿರುವ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವರ ಕಂಬಳ ಎಂದೇ ಪ್ರತೀತಿ ಹೊಂದಿರುವ ಹೊಕ್ಕಾಡಿಗೋಳಿಯಲ್ಲಿ ಶನಿವಾರ ಬೆಳಿಗ್ಗೆ ಆರಂಭಗೊಂಡ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪ್ರಸ್ತಾವಿಕ ಮಾತನಾಡಿದರು.

ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು.

ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪಿ.ಅನಂತ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಲಿಯನಡುಗೋಡು ಮುಜಿಲ್ನಾಯ ಟ್ರಸ್ಟ್‌ನ ಗೌರವಾಧ್ಯಕ್ಷ ಮೂಡಬಿದಿರೆ ಚೌಟರ ಅರಮನೆ ಕುಲದೀಪ್ ಎಂ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಕೆ.ರತ್ನಕುಮಾರ್ ಚೌಟ ಶುಭ ಹಾರೈಸಿದರು.

ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ ಸುಂದರ ಶಾಂತಿ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಾರ್ಯದರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕೋಶಾಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜತೆ ಕಾರ್ಯದರ್ಶಿ ಪುಷ್ಪರಾಜ ಜೈನ್, ಉಪಾಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಪ್ರಣೀತ್ ಹಿಂಗಾಣಿ, ಹರೀಶ್ ಹಿಂಗಾಣಿ, ರಾಜೇಶ್ ಶೆಟ್ಟಿ ಸಿದ್ಧಕಟ್ಟೆ, ಜರ್ನಾದನ ನಾಯ್ಕ್ ಕರ್ಪೆ, ಆನಂದ ಶೆಟ್ಟಿ ತಿರುಮಲೆ ಕೋಡಿ, ಶಶಿಧರ ಶೆಟ್ಟಿ ಕಲ್ಲಾಪು, ನಿತ್ಯಾನಂದ ಪೂಜಾರಿ ಕೆಂತಲೆ, ಬೇಬಿ ಶೆಟ್ಟಿ ಕಲಾಯಿದಡ್ಡ, ರಘುರಾಮ ಶೆಟ್ಟಿ ದೇವಸ್ಯ, ಭುಜಂಗ ಶೆಟ್ಟಿ ಹೊಕ್ಕಾಡಿಗೋಳಿ, ನವೀನ್ ಕುಂಜಾಡಿ, ಲೋಕನಾಥ ಶೆಟ್ಟಿ ಪಮುಂಜ, ಹೆಚ್.ಎ.ರಹಿಮಾನ್, ಸ್ಥಳದಾನಿಗಳಾದ ಸುಧಾಕರ ಚೌಟ ಬಾವ ಹೊಸಬೆಟ್ಟು, ಸುರ್ ಶೆಟ್ಟಿ ಹೊಕ್ಕಾಡಿಗೋಳಿ,ಲಲಿತ ಗುಮ್ಮಣ್ಣ ಶೆಟ್ಟಿ , ಪ್ರವೀಣ್ ಕುಲಾಲ್, ಹರೀಶ್ ಶೆಟ್ಟಿ ಮತ್ತಿತರರು ಇದ್ದರು.

ಸಮಿತಿ ಗೌರವ ಸಲಹೆಗಾರ ನೋಟರಿ ವಕೀಲ ಸುರೇಶ ಶೆಟ್ಟಿ ಸ್ವಾಗತಿಸಿದರು. ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ವಂದಿಸಿದರು.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.