ಸಾಂಸ್ಕೃತಿಕ

26ರಂದು ಸಂಚಯಗಿರಿಯಲ್ಲಿ ವಚನದೀಪ್ತಿ

ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ 26ರಂದು ಸಂಜೆ 4ರಿಂದ ವಚನದೀಪ್ತಿ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರಾದ ಡಾ. ವಿಜಯನಾರಾಯಣ ತೋಳ್ಪಾಡಿ ಮತ್ತು ಡಾ.ವೀಣಾ ತೋಳ್ಪಾಡಿ ತಿಳಿಸಿದ್ದಾರೆ.

ಈ ಸಂದರ್ಭ ವಚನ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಎಂಬ ವಿಷಯದ ಬಗ್ಗೆ ಮಂಗಳಗಂಗೋತ್ರಿಯ ಎಸ್.ವಿ.ಪಿ. ಕನ್ನಡ ಅಧ್ಯಯನ ವಿಭಾಗದ ಸಹಪ್ರಾಧ್ಯಾಪಕ ಡಾ. ನಾಗಪ್ಪ ಗೌಡ ಆರ್ ಮಾತನಾಡಲಿದ್ದಾರೆ. ವಚನಗಳಲ್ಲಿ ನುಡಿ ನಡೆ ವಿಷಯದಲ್ಲಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಮಾತನಾಡುವರು. ಮಂಗಳೂರು ವಿವಿಯ ಡಾ.ಎಚ್.ಎಂ.ಸೋಮಶೇಖರಪ್ಪ ಉಪಸ್ಥಿತರಿರುವರು. ಬಳಿಕ ಸಂಜೆ 6ರಿಂದ ವಚನ ಗಾಯನ ಇರಲಿದೆ. ಸಹನಾ, ಮೇಘನಾ ಗಾಯನ, ಕೀಬೋರ್ಡ್ ನಲ್ಲಿ ಭಾಸ್ಕರ ರಾವ್, ಕೊಳಲಿನಲ್ಲಿ ವರುಣ್ ಎಂ.ರಾವ್ ಮತ್ತು ತಬಲಾದಲ್ಲಿ ನಚಿಕೇತ ದಾಮ್ಲೆ ಸಹಕರಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ