ಬಂಟ್ವಾಳ

ಫರಂಗಿಪೇಟೆ ಮರ್ಡರ್: ಮತ್ತೊಬ್ಬ ಅಂದರ್

www.bantwalnews.com

ಕಳೆದ ತಿಂಗಳ ಹಿಂದೆ ಫರಂಗಿಪೇಟೆಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊರ್ವ ಆರೋಪಿಯನ್ನು ಸೋಮವಾರ ಮಂಗಳೂರು ಡಿಸಿಐಬಿ ತಂಡ ಬಂಧಿಸಿದೆ. ಅಡ್ಯಾರ್ ನಿವಾಸಿ ಇಮ್ರಾನ್ ಯಾನೆ ಪಲ್ಟಿ ಇಮ್ರಾನ್ ಬಂಧಿತ ಆರೋಪಿ.

ಜಾಹೀರಾತು

ಡಿಸಿಐಬಿ ಇನ್ ಸ್ಪೆಕ್ಟರ್ ಅಮಾನುಲ್ಲಾ ನೇತೃತ್ವ ತಂಡವು ಇಂದು ಕಾರ್ಯಾಚರಣೆ ನಡೆಸಿ ಮಂಗಳೂರಿನ ತೊಕ್ಕೊಟ್ಟಿನಲ್ಲಿ ಇಮ್ರಾನ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಗಾಗಿ ಈತನನ್ನು ಬಂಟ್ವಾಳ ಎಎಸ್ಪಿ ಡಾ.ಅರುಣ್ ಅವರಿಗೆ ಹಸ್ತಾಂತರಿಸಿದ್ದಾರೆ.

ಇತ್ತೀಚೆಗೆ ಫರಂಗಿಪೇಟೆಯಲ್ಲಿ ಅಡ್ಯಾರ್ ಮತ್ತು ಕಣ್ಣೂರಿನ ತಂಡ ಎರಡು ವಾಹನದಲ್ಲಿ ಅಗಮಿಸಿ ನಡೆಸಿದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಝಿಯಾ ಮತ್ತು ಫಯಾಜ್ ಎಂಬವರಿಬ್ಬರು ಕೊಲೆಗೀಡಾಗಿದ್ದರು. ಹಾಗೆಯೇ ಅನೀಸ್, ಪೈಝಲ್ ಮತ್ತು ಮುಸ್ತಾಕ್ ಎಂಬವರು ಗಂಭೀರ ಗಾಯಗೊಂಡಿದ್ದರು. ಘಟನೆಗೆ ಹಳೆಯ ದ್ವೇಷವೇ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 11 ಮಂದಿಯನ್ನು ಬಂಧಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ