ಬಂಟ್ವಾಳ

ಬಿ.ಸಿ.ರೋಡ್ ಸಂಚಯಗಿರಿಯಲ್ಲಿ ವಚನದೀಪ್ತಿ

www.bantwalnews.com

ಜಾಹೀರಾತು

ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಭಾನುವಾರ ಸಂಜೆ  ವಚನದೀಪ್ತಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ವಚನ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ವಿಷಯದ ಬಗ್ಗೆ ಮಂಗಳಗಂಗೋತ್ರಿಯ ಎಸ್.ವಿ.ಪಿ. ಕನ್ನಡ ಅಧ್ಯಯನ ವಿಭಾಗದ ಸಹಪ್ರಾಧ್ಯಾಪಕ ಡಾ. ನಾಗಪ್ಪ ಗೌಡ ಆರ್, ವಚನಗಳಲ್ಲಿ ನುಡಿ ನಡೆ ವಿಷಯದಲ್ಲಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಮಾತನಾಡಿದರು.

ಮಂಗಳೂರು ವಿವಿಯ ಡಾ.ಎಚ್.ಎಂ.ಸೋಮಶೇಖರಪ್ಪ ಅಧ್ಯಕ್ಷತೆ ವಹಿಸಿದ್ದರು. ಆಯೋಜಕರಾದ ಡಾ. ವಿಜಯನಾರಾಯಣ ತೋಳ್ಪಾಡಿ ಮತ್ತು ಡಾ.ವೀಣಾ ತೋಳ್ಪಾಡಿ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಡಾ. ತುಕಾರಾಮ ಪೂಜಾರಿ, ಡಾ. ಆಶಾಲತಾ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ರಾಧೇಶ ತೋಳ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಮಹಾಬಲೇಶ್ವರ ಹೆಬ್ಬಾರ ವಂದಿಸಿದರು.

ಬಳಿಕ ವಚನ ಗಾಯನ ನಡೆಯಿತು. ಸಹನಾ, ಮೇಘನಾ ಗಾಯನ, ಕೀಬೋರ್ಡ್ ನಲ್ಲಿ ಭಾಸ್ಕರ ರಾವ್, ಕೊಳಲಿನಲ್ಲಿ ವರುಣ್ ಎಂ.ರಾವ್ ಮತ್ತು ತಬಲಾದಲ್ಲಿ ನಚಿಕೇತ ದಾಮ್ಲೆ ಸಹಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts