ವಿಟ್ಲ

ವಿಟ್ಲ ಮಂಗಳಪದವಿನಲ್ಲಿ ಕೋಅಪರೇಟಿವ್ ಸೊಸೈಟಿ ಕಳವಿಗೆ ವಿಫಲ ಯತ್ನ

www.bantwalnews.com

ವಿಟ್ಲದ ಮಂಗಳಪದವಿನಲ್ಲಿರುವ ಗಾಯತ್ರಿ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿಗೆ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗಿನ ಅವಧಿಯಲ್ಲಿ ಕಳ್ಳರು ನುಗ್ಗಿದ್ದಾರೆ. ಶಟರ್ ಮುರಿದು ಒಳನುಗ್ಗಿದ ಕಳ್ಳರು, ಬ್ಯಾಂಕಿನೊಳಗಿದ್ದ ಕ್ಯಾಷ್ ಡ್ರಾವರ್, ಕಪಾಟನ್ನು ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಬ್ಯಾಂಕ್ ಲಾಕರ್ ಅನ್ನೂಮುರಿಯಲು ವಿಫಲ ಯತ್ನ ನಡೆಸಿದ್ದಾರೆ. ಆದರೆ ಯಾವುದೇ ಸೊತ್ತುಗಳು ಕಳವಾಗಿಲ್ಲ.

ಜಾಹೀರಾತು

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬ್ಯಾಂಕ್, ಸೊಸೈಟಿಯಂಥ ಜಾಗಗಳಿರುವ ಕಡೆ ಬೀಟ್ ವ್ಯವಸ್ಥೆ ಬಲಗೊಳಿಸಬೇಕು ಎಂಬ ಮಾತು ಕೇಳಿಬರುತ್ತಿರುವಾಗಲೇ ಈ ಘಟನೆ ನಡೆದಿದೆ. ವಿಟ್ಲ ಹೊರವಲಯದಲ್ಲಿರುವ ಮಂಗಳಪದವಿಗೂ ಪೊಲೀಸ್ ಠಾಣೆಗೂ ಅಂಥ ದೂರವೇನಿಲ್ಲ. ಆದರೂ ಕಳ್ಳರು ನಿರ್ಭಯವಾಗಿ ನುಗ್ಗುತ್ತಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ