ವಾಮದಪದವು

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.

ಜಾಹೀರಾತು

ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜಿನಲ್ಲಿ ನಡೆದ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಯಾವುದೇ ಭೇದಭಾವವಿಲ್ಲದೆ ಒಂದೇ ಮನಸ್ಸಿನಿಂದ ಭಾಗವಹಿಸಿ ಶಿಬಿರದಲ್ಲಿ ಸಿಗುವ ಉನ್ನತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗುವುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.

ಜಿ.ಪಂ. ಸದಸ್ಯ ಪದ್ಮಶೇಖರ ಜೈನ್, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರಶಾಂತಿ, ಬಂಟ್ವಾಳ ವಿಜಯಾ ಬ್ಯಾಂಕ್ ವ್ಯವಸ್ಥಾಪಕ ಬೇಬಿ ಕುಂದರ್, ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ ನಾಯ್ಕ, ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸೀತಾರಾಮ್ ಶೆಟ್ಟಿ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅರ್ಕಕೀರ್ತಿ ಇಂದ್ರ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಲೋಕಯ್ಯ ಗಾಡಿಪಲ್ಕೆ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಕವಿತಾ ವಿ. ಶೆಟ್ಟಿಗಾರ್, ಎನ್.ಎಸ್.ಎಸ್. ಘಟಕ ನಾಯಕರಾದ ಸುಮಂತ್ ಎಸ್. ಕೆ, ಕೀರ್ತನ್, ಪ್ರತೀಕ್ಷಾ ಮತ್ತು ಪಂಚಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸಹಶಿಬಿರಾಧಿಕಾರಿ ಪ್ರದೀಪ್ ಪೂಜಾರಿ, ಅನಿಲ್, ಉಲ್ಲೇಖ ಜೈನ್, ಸಂಗೀತ ಶಾನ್‌ಬೋಗ್ ಮತ್ತು ಸುಷ್ಮಾ ಮತ್ತಿತರರು ಸಹಕರಿಸಿದರು.

ಎನ್.ಎಸ್.ಎಸ್. ಶಿಬಿರಾರ್ಥಿ ರಕ್ಷಾ ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಕಿಟ್ಟು ರಾಮಕುಂಜ ಸ್ವಾಗತಿಸಿ, ಶಿಬಿರಾಧಿಕಾರಿ ಡಾ. ಮಂಜುನಾಥ ಉಡುಪ ವಂದಿಸಿದರು. ಶಿಬಿರಾರ್ಥಿ ಸುದರ್ಶನ್ ಡಿ. ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago