ವಾಮದಪದವು

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.

ಜಾಹೀರಾತು

ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜಿನಲ್ಲಿ ನಡೆದ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಯಾವುದೇ ಭೇದಭಾವವಿಲ್ಲದೆ ಒಂದೇ ಮನಸ್ಸಿನಿಂದ ಭಾಗವಹಿಸಿ ಶಿಬಿರದಲ್ಲಿ ಸಿಗುವ ಉನ್ನತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗುವುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.

ಜಿ.ಪಂ. ಸದಸ್ಯ ಪದ್ಮಶೇಖರ ಜೈನ್, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರಶಾಂತಿ, ಬಂಟ್ವಾಳ ವಿಜಯಾ ಬ್ಯಾಂಕ್ ವ್ಯವಸ್ಥಾಪಕ ಬೇಬಿ ಕುಂದರ್, ಸಿದ್ಧಕಟ್ಟೆ ಸರಕಾರಿ ಪದವಿ ಪರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ ನಾಯ್ಕ, ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸೀತಾರಾಮ್ ಶೆಟ್ಟಿ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅರ್ಕಕೀರ್ತಿ ಇಂದ್ರ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಲೋಕಯ್ಯ ಗಾಡಿಪಲ್ಕೆ, ಸರಕಾರಿ ಪದವಿ ಪರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಕವಿತಾ ವಿ. ಶೆಟ್ಟಿಗಾರ್, ಎನ್.ಎಸ್.ಎಸ್. ಘಟಕ ನಾಯಕರಾದ ಸುಮಂತ್ ಎಸ್. ಕೆ, ಕೀರ್ತನ್, ಪ್ರತೀಕ್ಷಾ ಮತ್ತು ಪಂಚಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ರಾಷ್ಟ್ರೀಯ ಸೇವಾ ಯೋಜನೆಯ ಸಹಶಿಬಿರಾಧಿಕಾರಿ ಪ್ರದೀಪ್ ಪೂಜಾರಿ, ಅನಿಲ್, ಉಲ್ಲೇಖ ಜೈನ್, ಸಂಗೀತ ಶಾನ್‌ಬೋಗ್ ಮತ್ತು ಸುಷ್ಮಾ ಮತ್ತಿತರರು ಸಹಕರಿಸಿದರು.

ಎನ್.ಎಸ್.ಎಸ್. ಶಿಬಿರಾರ್ಥಿ ರಕ್ಷಾ ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಕಿಟ್ಟು ರಾಮಕುಂಜ ಸ್ವಾಗತಿಸಿ, ಶಿಬಿರಾಧಿಕಾರಿ ಡಾ. ಮಂಜುನಾಥ ಉಡುಪ ವಂದಿಸಿದರು. ಶಿಬಿರಾರ್ಥಿ ಸುದರ್ಶನ್ ಡಿ. ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ