ಜಿಲ್ಲಾ ಸುದ್ದಿ

ಸಾಮರಸ್ಯದ ನಡಿಗೆ – ಸೌಹಾರ್ದತೆಯೆಡೆಗೆ ಲಾಂಛನ, ಪೋಸ್ಟರ್ ಬಿಡುಗಡೆ

www.bantwalnews.com

ಜಾಹೀರಾತು

ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಡಿಸೆಂಬರ್ 12, ಮಂಗಳವಾರ ಬೆಳಗ್ಗೆ 9ರಿಂದ ಫರಂಗಿಪೇಟೆಯಿಂದ ಮಾಣಿವರೆಗಿನ ಕಾಲ್ನಡಿಗೆ ಜಾಥಾದ ಲಾಂಛನ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನಲ್ಲಿ ಗುರುವಾರ ನಡೆಯಿತು.

ಫರಂಗಿಪೇಟೆಯಿಂದ ಜಾಥಾ ಆರಂಭಗೊಂಡು ಸಂಜೆ 4 ಗಂಟೆಗೆ ಮಾಣಿ ತಲುಪುವ ಜಾಥಾದ ಅಂತ್ಯದಲ್ಲಿ ಸಭಾ ಕಾರ್ಯಕ್ರಮ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂಬ ಹೆಸರುಪಡೆದಿದ್ದರೂ ಭ್ರಾತೃತ್ವ ಮತ್ತು ಒಗ್ಗಟ್ಟಿನ ಕೊರತೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಲು ಏಕತೆ, ಸಾಮರಸ್ಯದ ನಡಿಗೆ ನಡೆಸಲು ಚಿಂತನೆ ನಡೆಸಲಾಗಿತ್ತು. ಇದರ ಭಾಗವಾಗಿಯೇ ಡಿ.12ರಂದು ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಎಂಬ ಘೋಷವಾಕ್ಯದಡಿ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಸುದ್ದಿಗಾರರಿಗೆ ನಡಿಗೆಯ ರೂವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಇದು ಪಕ್ಷಾತೀತವಾಗಿರಲಿದೆ. ನಾನಾ ಧರ್ಮ, ಸಾಮಾಜಿಕ ಸಂಘಟನೆ ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಹಿಂಸೆ ಪ್ರಚೋದಕರಿಗೆ ನಮ್ಮ ಬೆಂಬಲವಿಲ್ಲ. ಇದು ಶಾಂತಿಪ್ರಿಯರಿಗೆ ಮಾತ್ರ ಇರುವ ನಡಿಗೆ. ಶಾಂತಿಪ್ರಿಯ ಜನತೆ ನಮ್ಮೊಂದಿಗೆ ಕೈಜೋಡಿಸಿ ಸಾಮರಸ್ಯಕ್ಕೆ ಹೆಜ್ಜೆ ಹಾಕೋಣ ಎಂದು ರೈ ಹೇಳಿದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಸುಶೀಲ್ ನೊರೋನ್ಹ, ರೀಟಾ ನೊರೋನ್ಹ, ಯೋಗೀಶ ಶೆಟ್ಟಿ ಜೆಪ್ಪು, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಯಾದವ ಶೆಟ್ಟಿ, ಎಂ.ದೇವದಾಸ, ಟಿ.ನಾರಾಯಣ ಪೂಜಾರಿ, ವಾಸುದೇವ ಕುಳೂರು, ಚಂದು ಎಲ್, ವಿಶುಕುಮಾರ್, ಸೀತಾರಾಮ ಬೆರಿಂಜ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

10 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago