ಜಿಲ್ಲಾ ಸುದ್ದಿ

ಸಾಮರಸ್ಯದ ನಡಿಗೆ – ಸೌಹಾರ್ದತೆಯೆಡೆಗೆ ಲಾಂಛನ, ಪೋಸ್ಟರ್ ಬಿಡುಗಡೆ

www.bantwalnews.com

ಜಾಹೀರಾತು

ಜಾಹೀರಾತು

ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಡಿಸೆಂಬರ್ 12, ಮಂಗಳವಾರ ಬೆಳಗ್ಗೆ 9ರಿಂದ ಫರಂಗಿಪೇಟೆಯಿಂದ ಮಾಣಿವರೆಗಿನ ಕಾಲ್ನಡಿಗೆ ಜಾಥಾದ ಲಾಂಛನ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನಲ್ಲಿ ಗುರುವಾರ ನಡೆಯಿತು.

ಫರಂಗಿಪೇಟೆಯಿಂದ ಜಾಥಾ ಆರಂಭಗೊಂಡು ಸಂಜೆ 4 ಗಂಟೆಗೆ ಮಾಣಿ ತಲುಪುವ ಜಾಥಾದ ಅಂತ್ಯದಲ್ಲಿ ಸಭಾ ಕಾರ್ಯಕ್ರಮ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂಬ ಹೆಸರುಪಡೆದಿದ್ದರೂ ಭ್ರಾತೃತ್ವ ಮತ್ತು ಒಗ್ಗಟ್ಟಿನ ಕೊರತೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಲು ಏಕತೆ, ಸಾಮರಸ್ಯದ ನಡಿಗೆ ನಡೆಸಲು ಚಿಂತನೆ ನಡೆಸಲಾಗಿತ್ತು. ಇದರ ಭಾಗವಾಗಿಯೇ ಡಿ.12ರಂದು ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಎಂಬ ಘೋಷವಾಕ್ಯದಡಿ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಸುದ್ದಿಗಾರರಿಗೆ ನಡಿಗೆಯ ರೂವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಜಾಹೀರಾತು

ಇದು ಪಕ್ಷಾತೀತವಾಗಿರಲಿದೆ. ನಾನಾ ಧರ್ಮ, ಸಾಮಾಜಿಕ ಸಂಘಟನೆ ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಹಿಂಸೆ ಪ್ರಚೋದಕರಿಗೆ ನಮ್ಮ ಬೆಂಬಲವಿಲ್ಲ. ಇದು ಶಾಂತಿಪ್ರಿಯರಿಗೆ ಮಾತ್ರ ಇರುವ ನಡಿಗೆ. ಶಾಂತಿಪ್ರಿಯ ಜನತೆ ನಮ್ಮೊಂದಿಗೆ ಕೈಜೋಡಿಸಿ ಸಾಮರಸ್ಯಕ್ಕೆ ಹೆಜ್ಜೆ ಹಾಕೋಣ ಎಂದು ರೈ ಹೇಳಿದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಸುಶೀಲ್ ನೊರೋನ್ಹ, ರೀಟಾ ನೊರೋನ್ಹ, ಯೋಗೀಶ ಶೆಟ್ಟಿ ಜೆಪ್ಪು, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಯಾದವ ಶೆಟ್ಟಿ, ಎಂ.ದೇವದಾಸ, ಟಿ.ನಾರಾಯಣ ಪೂಜಾರಿ, ವಾಸುದೇವ ಕುಳೂರು, ಚಂದು ಎಲ್, ವಿಶುಕುಮಾರ್, ಸೀತಾರಾಮ ಬೆರಿಂಜ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ