ಸುಜ್ಞಾನದ ನೇತ್ರವರಳಿಸುವ ಕಾರ್ಯ ಗುರುಚರಿತ್ರೆಯಿಂದ: ಒಡಿಯೂರು ಶ್ರೀಗಳು

ಚಿತ್ರ: ಕ್ಲಿಕ್ ಪಾಯಿಂಟ್ ಕನ್ಯಾನ

ಅಂತರಂಗದಲ್ಲಿ ಆನಂದವನ್ನು ಅನುಭವಿಸುವುದಕ್ಕೆ ಸಿದ್ಧತೆ ಬೇಕು. ಜೀವನದ ಉದ್ಧಾರಕ್ಕೆ ಆನಂದ ರಸ ಅವಶ್ಯಕ. ಇದನ್ನು ಅನುಭವಿಸುವುದನ್ನೇ ಆನಂದ ಪರಂಪರೆ ಎಂದರು. ಅಜ್ಞಾನದ ಕತ್ತಲನ್ನು ನಿವಾರಿಸಿ ಸುಜ್ಞಾನದ ಕಣ್ಣನ್ನು ಅರಳಿಸುವ ಕೆಲಸ ಗುರುಚರಿತ್ರೆ ಮಾಡುತ್ತದೆ. ಮನಸ್ಸಿನ ಪರಿವರ್ತನೆಯನ್ನೂ ಪ್ರವಚನದ ಮೂಲಕ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಸೂರ್ಯನನ್ನೇ ಗುರುವಾಗಿ ಸ್ವೀಕರಿಸಿದ ಶ್ರೀಗುರುದತ್ತಾತ್ರೇಯರು ಧರ್ಮಸೂತ್ರದಲ್ಲಿ ಜೀವನ ಸಾಗಿಸುವ ವಿಧಾನವನ್ನು ಬೋಧಿಸಿದರು. ಜಗತ್ತಿನ ಸಕಲ ಜೀವರಾಶಿಗಳಿಗೆ ಜೀವ ತುಂಬಿಸುವ ಸೂರ್ಯ ಸಮುದ್ರದ ಉಪ್ಪು ನೀರನ್ನೇ ಸಿಹಿಯಾಗಿಸಿ ಮಳೆಯ ರೂಪದಲ್ಲಿ ಇಳೆಗೆ ತಂಪೆರೆಯುವನು. ಹಾಗೆಯೇ ಪ್ರತಿಯೊಂದರಲ್ಲಿಯೂ ನಾವು ಕಲಿಯುವವಂತಹದ್ದು ಬಹಳಷ್ಟಿದೆ. ಗುರುತತ್ತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಅರ್ಥಪೂರ್ಣವಾಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕತೆಯನ್ನು  ಪಡೆಯಬಹುದು” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ದತ್ತಜಯಂತಿಯ ಸುಸಂದರ್ಭ ಆಯೋಜಿಸಿದ್ದ ಶ್ರೀ ಗುರುಚರಿತ್ರೆ ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮಲಾರು ಜಯರಾಮ ರೈ ಶ್ರೀ ಗುರುಚರಿತ್ರೆ ಪ್ರವಚನಗೈದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸುಜ್ಞಾನದ ನೇತ್ರವರಳಿಸುವ ಕಾರ್ಯ ಗುರುಚರಿತ್ರೆಯಿಂದ: ಒಡಿಯೂರು ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*