ದಿಕ್ಕು ಬದಲಿಸಿದ ಓಖಿ, ಆತಂಕ ಬೇಡ ಮಂಗಳೂರಲ್ಲಿ ಉನ್ನತ ಮಟ್ಟದ ಸಭೆ

www.bantwalnews.com

ಓಖಿ ಚಂಡಮಾರುತದ ಪ್ರಭಾವ ರಾಜ್ಯದ ಕರಾವಳಿ ತೀರದಲ್ಲಿಯೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ಆಹಾರ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಸಭೆಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈಗಾಗಲೇ ಡಿ.2ರಂದು ಸಂಜೆ 6 ಗಂಟೆಗೆ ಕರಾವಳಿಯಲ್ಲಿ ಕಡಲ ತೀವ್ರ ಅಲೆಗಳ ಮುನ್ಸೂಚನೆ ಬಂದಿದ್ದು, ಜಿಲ್ಲಾಡಳಿತ ಕೂಡಲೇ ಸನ್ನದ್ಧವಾಗಿತ್ತು. ಉಳ್ಳಾಲ ಆಸುಪಾಸಿನಲ್ಲಿ ತೀವ್ರ ಸಮುದ್ರ ಅಭ್ಬರಕ್ಕೆ 2 ಮನೆಗಳು ಸಂಪೂರ್ಣವಾಗಿ ಕುಸಿದುಬಿದ್ದಿದೆ. 6 ಮನೆಗಳು ಭಾಗಶ: ಹಾನಿಗೊಂಡಿವೆ. ಮುಂಜಾಗ್ರತಾ ಕ್ರಮವಾಗಿ 35 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಮೀನುಗಾರಿಕಾ ದೋಣಿಗಳನ್ನು ಸಮುದ್ರಕ್ಕೆ ತೆರಳದಂತೆ ನಿರ್ಬಂಧಿಸಲಾಗಿದೆ. ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಳ್ಳಾಲ ನಗರಸಭೆ ಕಚೇರಿಯಲ್ಲಿಯೂ 24 ಗಂಟೆಗಳ ಕಂಟ್ರೋಲ್ ರೂಂ ತೆರೆದಿಡಲಾಗಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಭೆಗೆ ತಿಳಿಸಿದರು. ಪ್ರವಾಸಿಗರಿಗೆ ಸದ್ಯಕ್ಕೆ ಕರಾವಳಿ ತೀರಕ್ಕೆ ಆಗಮಿಸದಂತೆ ಅವರು ಮನವಿ ಮಾಡಿದರು. ಸದ್ಯ ಚಂಡಮಾರುತದ ಪ್ರಭಾವ ಉತ್ತರದತ್ತ ಚಲಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಾಹೀರಾತು

ಆಹಾರ ಸಚಿವ ಯು.ಟಿ. ಖಾದರ್ ಮಾತನಾಡಿ, ಎಲ್ಲಾ ಇಲಾಖೆಗಳು ತ್ವರಿತವಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ನಾಗರೀಕರು ಪಾಲಿಸಬೇಕು. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹೊರಗಡೆಯ ಜನರು ಅನಗತ್ಯವಾಗಿ ಘಟನಾ ಸ್ಥಳದಲ್ಲಿ ಸೇರದಂತೆ ಅವರು ಮನವಿ ಮಾಡಿದರು.

ಮುಂಜಾಗ್ರತಾ ಕ್ರಮವಾಗಿ ಕೋಸ್ಟ್ ಗಾರ್ಡ್ ವತಿಯಿಂದ 4 ಹೆಲಿಕಾಪ್ಟರ್ ಗಳು  ಗೋವಾದಿಂದ ಮಂಗಳೂರಿಗೆ ಆಗಮಿಸಲಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಡಲಕೊರತೆಯಿಂದ ಮನೆ ಹಾನಿಗೀಡಾದವರಿಗೆ ಪರಿಹಾರ ಚೆಕ್ಕನ್ನು ಸಚಿವರು ವಿತರಿಸಿದರು.

ಜಾಹೀರಾತು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಸಹಾಯಕ ಆಯುಕ್ತ ರೇಣುಕಾಪ್ರಸಾದ್, ಕೋಸ್ಟ್ ಗಾರ್ಡ್ ಅಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಿಕ್ಕು ಬದಲಿಸಿದ ಓಖಿ, ಆತಂಕ ಬೇಡ ಮಂಗಳೂರಲ್ಲಿ ಉನ್ನತ ಮಟ್ಟದ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*