Categories: ಬಂಟ್ವಾಳ

ಸಾಹಿತ್ಯದ ವಾತಾವರಣ ಪಸರಿಸಲು ಕಾರ್ಯಕ್ರಮಗಳು ಅಗತ್ಯ: ಪ್ರೊ.ತುಕಾರಾಮ ಪೂಜಾರಿ

  • ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಕಾರ್ಯಾಲಯ ಉದ್ಘಾಟನೆ

www.bantwalnews.com REPORT

ಜಾಹೀರಾತು

ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಡಿ.16 ರಂದು ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಪ್ರಯುಕ್ತ ಸೋಮವಾರ ಸಂಜೆ ಬಿ.ಸಿ.ರೋಡ್, ಪದ್ಮ ಕಾಂಪ್ಲೆಕ್ಸ್ 1 ನೇ ಮಹಡಿಯಲ್ಲಿ ಕಾರ್ಯಾಲಯವನ್ನು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ.ತುಕಾರಾಮ ಪೂಜಾರಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಬಿ.ಸಿ.ರೋಡ್ ಸಹಿತ ಬಂಟ್ವಾಳ ಪರಿಸರದ ಜನರ ಮನೋಭಾವನೆ ಸಾಹಿತ್ಯ, ಸಾಂಸ್ಕೃತಿಕ ನೆಲೆಯಲ್ಲಿ ಬದಲಾಗಬೇಕಾಗಿದೆ. ನಮ್ಮ ತಾಲೂಕು ಸಾಂಸ್ಕೃತಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಅದನ್ನು ನೆನಪಿಸುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಡಿ.10ರಂದು ನಡೆಯುವ ತುಳು ಸಾಹಿತ್ಯ ಸಮ್ಮೇಳನ ಹಾಗೂ ಡಿ.16ರಂದು ನಡೆಯುವ ಡಾ.ಏರ್ಯ ಸಾಹಿತ್ಯ ಸಂಭ್ರಮ ಮುನ್ನುಡಿಯಾಗಲಿ. ಸಾಹಿತ್ಯದ ವಾತಾವರಣ ತಾಲೂಕಿನಾದ್ಯಂತ ಪಸರಿಸಲಿ ಎಂದು ಶುಭ ಹಾರೈಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈವಿಧ್ಯಗಳನ್ನು ಏರ್ಪಡಿಸುವ ಮೂಲಕ ಜನಸಾಮಾನ್ಯರನ್ನೂ ಸಾಹಿತ್ಯ ಚಟುವಟಿಕೆಯತ್ತ ಆಕರ್ಷಿಸಲು ಸಾಧ್ಯ ಎಂದರು.

ಸಂಘಟಕ ಲೋಕನಾಥ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ ಪೂಂಜ, ಕಾರ್ಯಕ್ರಮದ ಆಯೋಜಕರಾದ ವಿಶ್ವನಾಥ ಬಂಟ್ವಾಳ, ಬಿ.ತಮ್ಮಯ್ಯ, ಎಚ್. ಸುಂದರ ರಾವ್, ಬಿ.ತಮ್ಮಯ್ಯ, ರಝಾಕ್ ಉಪಸ್ಥಿತರಿದ್ದರು. ಪತ್ರಕರ್ತ ಫಾರೂಕ್ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯರಾದ ಮಹಾಬಲೇಶ್ವರ ಹೆಬ್ಬಾರ ಕಾರ್ಯಕ್ರಮದ ಆಶಯಗಳನ್ನು ವಿವರಿಸಿದರು. ಕಲಾವಿದ ಮಂಜು ವಿಟ್ಲ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ