ಯಕ್ಷಗಾನ

ಬಲಿಪ ನಾರಾಯಣ ಭಾಗವತರಿಗೆ ಪದ್ಯಾಣ ಪ್ರಶಸ್ತಿ

ತೆಂಕುತಿಟ್ಟು ಯಕ್ಷಗಾನದ ಮಹಾ ಭಾಗವತ ಬಲಿಪ ನಾರಾಯಣ ಭಾಗವತರಿಗೆ ಸಾಲಿನಪದ್ಯಾಣ ಪ್ರಶಸ್ತಿ ಘೋಷಣೆಯಾಗಿದೆ. ಸುಳ್ಯ ತಾಲೂಕು ಕಲ್ಮಡ್ಕದಪದ್ಯಾಣ ಪ್ರಶಸ್ತಿ ಸಮಿತಿಯ ಆಯೋಜನೆಯಲ್ಲಿ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ದಶಂಬರ 10, ರವಿವಾರದಂದು ಅಪರಾಹ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಪದ್ಯಾಣ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ವಹಿಸಲಿದ್ದಾರೆ. ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್(ರಿ) ಅಳಿಕೆ ಇದರ ಅಧ್ಯಕ್ಷ ಯು. ಗಂಗಾಧರ ಭಟ್, ಹಿರಿಯ ಅಥsದಾರಿ ಉಡುವೆಕೋಡಿ ಸುಬ್ಬಪ್ಪಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಲಾವಿದ ವಾಸುದೇವ ರಂಗಾಭಟ್ ಆಭಿನಂದನಾ ಭಾಷಣ ಮಾಡಲಿದ್ದಾರೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಕಳೆದ ವರುಷ ಸ್ಥಾಪಿಸಿದ ಮೊದಲ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರಿಗೆ ಪ್ರದಾನಿಸಲಾಗಿತ್ತು. ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿಕಲಾಕೃತಜ್ಞತೆ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ವರುಷ ಬಲಿಪ ನಾರಾಯಣ ಭಾಗವತರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕೆ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಇಂದಿನ ಯಕ್ಷಗಾನ ರಂಗದಲ್ಲಿ ಸರ್ವಾನುಮತ ಮತ್ತು ಶ್ರೇಷ್ಠತೆ ಎರಡನ್ನೂ ಹೊಂದಿದ ಬೆರಳೆಣಿಕೆಯ ಸಾಧಕರಲ್ಲಿ ಪ್ರಾಯಃ ಬಲಿಪ ನಾರಾಯಣ ಭಾಗವತರು ಮೂರ್ಧನ್ಯರು. ದೇಶದ ಪ್ರಾಚೀನ ರಂಗಭೂಮಿಯ ಅಗ್ರಪಂಕ್ತಿಯಲ್ಲಿ ಬಲಿಪರು ಸ್ಥಾನ ಪಡೆದವರು. ಎಂಭತ್ತು ವರುಷದ ಬಲಿಪರು ಕಳೆದ ಎಪ್ಪತ್ತು ವರುಷದಿಂದಲೂ ಹಾಡುತ್ತಿದ್ದಾರೆ. ಈಗಲೂ ಭಾಗವತಿಕೆ ಮಾಡುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿಶ್ರೀ ಹನುಮಗಿರಿ ಮೇಳದವರಿಂದದಕ್ಷಾಧ್ವರಗಿರಿಜಾಕಲ್ಯಾಣ ಪ್ರಸಂಗಗಳ ಬಯಲಾಟ ಜರುಗಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ