ಗ್ಯಾಸ್ ಸಿಲಿಂಡರ್ ಅಳವಡಿಸುವ ಸಂದರ್ಭ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಮೂರು ಮಂದಿ ಗಾಯಗೊಂಡ ಘಟನೆಯಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರೋಪಾಡಿ ಗ್ರಾಮದ ಕಲಾಯಿ ಗುತ್ತು ನಿವಾಸಿ ರಾಮಯ್ಯ ಶೆಟ್ಟಿ (68) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪತ್ನಿ ಜಯಂತಿ ಶೆಟ್ಟಿ ಹಾಗೂ ಗ್ಯಾಸ್ ಹೊಸ ಸಿಲಿಂಡರ್ ಅಳವಡಿಸಲು ಬಂದ ರಿಕ್ಷಾ ಚಾಲಕ ರಮೇಶ್ ಗಂಬೀರ ಗಾಯಗೊಂಡವರು. ರಾಮಯ್ಯ ಬುಧವಾರ ನಿಧನರಾಗಿದ್ದಾರೆ. ಅವರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.೨೫ರಂದು ಅಂಗಡಿಯಿಂದ ಹೊಸ ಸಿಲಿಂಡರ್ ತಂದಿದ್ದ ರಿಕ್ಷಾ ಚಾಲಕ ರಮೇಶ್ ಮನೆ ಮಂದಿ ಜತೆಗೆ ಅಳವಡಿಸಲು ಸಹಕರಿಸಿದ್ದಾರೆ. ಸಿಲಿಂಡರ್ ಅಳವಡಿಸಿ ಸ್ಟವ್ ಉರಿಸುವ ಸಮಯ ಏಕಾ ಏಕಿ ಬೆಂಕಿ ಹತ್ತಿಕೊಂಡಿದೆ. ಇದರಿಂದ ಮೂವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಾಯಾಳು ಆಸ್ಪತ್ರೆಯಲ್ಲಿ ಮೃತ"
Be the first to comment on "ಗಾಯಾಳು ಆಸ್ಪತ್ರೆಯಲ್ಲಿ ಮೃತ"