ವಿಟ್ಲ

ಗಾಯಾಳು ಆಸ್ಪತ್ರೆಯಲ್ಲಿ ಮೃತ

 

ಜಾಹೀರಾತು

ಗ್ಯಾಸ್ ಸಿಲಿಂಡರ್ ಅಳವಡಿಸುವ ಸಂದರ್ಭ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಮೂರು ಮಂದಿ ಗಾಯಗೊಂಡ ಘಟನೆಯಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಕರೋಪಾಡಿ ಗ್ರಾಮದ ಕಲಾಯಿ ಗುತ್ತು ನಿವಾಸಿ ರಾಮಯ್ಯ ಶೆಟ್ಟಿ (68) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪತ್ನಿ ಜಯಂತಿ ಶೆಟ್ಟಿ ಹಾಗೂ ಗ್ಯಾಸ್ ಹೊಸ ಸಿಲಿಂಡರ್ ಅಳವಡಿಸಲು ಬಂದ ರಿಕ್ಷಾ ಚಾಲಕ ರಮೇಶ್ ಗಂಬೀರ ಗಾಯಗೊಂಡವರು. ರಾಮಯ್ಯ ಬುಧವಾರ ನಿಧನರಾಗಿದ್ದಾರೆ. ಅವರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.೨೫ರಂದು ಅಂಗಡಿಯಿಂದ ಹೊಸ ಸಿಲಿಂಡರ್ ತಂದಿದ್ದ ರಿಕ್ಷಾ ಚಾಲಕ ರಮೇಶ್ ಮನೆ ಮಂದಿ ಜತೆಗೆ ಅಳವಡಿಸಲು ಸಹಕರಿಸಿದ್ದಾರೆ. ಸಿಲಿಂಡರ್ ಅಳವಡಿಸಿ ಸ್ಟವ್ ಉರಿಸುವ ಸಮಯ ಏಕಾ ಏಕಿ ಬೆಂಕಿ ಹತ್ತಿಕೊಂಡಿದೆ. ಇದರಿಂದ ಮೂವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.