ವಿಟ್ಲ

ಸ್ವಲಾತ್ ವಾರ್ಷಿಕೋತ್ಸವ

ವಿಟ್ಲ ಸಮೀಪದ ಉಕ್ಕುಡ ಬದ್ರಿಯಾ ಜುಮಾ ಮಸೀದಿ ಹಾಗೂ ಅದರ ಅಧೀನದಲ್ಲಿರುವ ಮುರ್ಶಿದುಲ್ ಅನಾಮ್ ಸ್ವಲಾತ್ ಕಮಿಟಿ ವತಿಯಿಂದ ಸೋಮವಾರ ರಾತ್ರಿ ಸ್ವಲಾತ್ ವಾರ್ಷಿಕೋತ್ಸವವು ಮಸೀದಿ ವಠಾರದಲ್ಲಿ ನಡೆಯಿತು.

ಜಾಹೀರಾತು

 ಧರ್ಮಗುರು ಕುಂಬೋಲ್ ಕೆ.ಎಸ್. ಮುಖ್ತಾರ್ ತಂಙಳ್ ಅವರು ಸಮಾರಂಭವನ್ನು ಉದ್ಘಾಟಿಸಿದರು. ಉಕ್ಕುಡ ಜುಮಾ ಮಸೀದಿಯ ಮುದರ್ರಿಸರಾದ ಅಹ್ಮದ್ ಶರೀಫ್ ಸಖಾಫಿ ಅವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ..ಜಿಲ್ಲಾ ವಕ್ಫ್ ಸಮಿತಿ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೂತನವಾಗಿ ನೇಮಕಗೊಂಡ ಉಕ್ಕುಡ ಜಮಾಅತ್ ಸದಸ್ಯ ರಶೀದ್ ವಿಟ್ಲ ಅವರನ್ನು ಕುಂಬೋಲ್ ಮುಖ್ತಾರ್ ತಂಙಳ್ ಅವರು ಶಾಲು, ಸ್ಮರಣಿಕೆ ನೀಡಿ ಸನ್ಮಾನಿಸಿದರು.

 ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರು ಮುಖ್ಯ ಭಾಷಣ ಮಾಡಿದರು. ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ನೆಕ್ಕರೆಕಾಡು, ಕಾರ್ಯದರ್ಶಿ ಶರೀಫ್ ತೊಯ್ಬ ಉಕ್ಕುಡ, ಸ್ವಲಾತ್ ಕಮಿಟಿ ಅಧ್ಯಕ್ಷ ಹನೀಫ್ ಟಿ.ಎಚ್.ಎಂ., ಕಾರ್ಯದರ್ಶಿ ಮಹಮ್ಮದ್ ಮಿದ್ಲಾಜ್, ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಹಮೀದ್ ಟಿ.ಎಚ್.ಎಂ.. ಮೊದಲಾದವರು ಉಪಸ್ಥಿತರಿದ್ದರು.

ಡಿ.ಎಂ. ರಶೀದ್ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಸ್ವಲಾತ್ ಮಜ್ಲಿಸ್, ಧಾರ್ಮಿಕ ಪ್ರವಚನ, ಮದ್ರಸ ಮಕ್ಕಳ ಹಾಗೂ ದರ್ಸ್ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನಡೆಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.