ಬಂಟ್ವಾಳ

ಡಾ. ಏರ್ಯ ಸಾಹಿತ್ಯ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಡಿ.16ರಂದು ಶನಿವಾರ ನಡೆಯುವ ಡಾ. ಏರ್ಯ ಸಾಹಿತ್ಯ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗುರುವಾರ ಸಂಜೆ ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನ ಸಾಹಿತ್ಯ ಸಂಭ್ರಮ ಕಾರ್ಯಾಲಯದಲ್ಲಿ ನಡೆಯಿತು.

ನೋಟರಿ ಮತ್ತು ವಕೀಲ ಅಶ್ವನಿ ಕುಮಾರ್ ರೈ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಹಿರಿಯ ಸಾಹಿತಿ ಡಾ. ಏರ್ಯ ಯುವ ಪೀಳಿಗೆಯೊಂದಿಗೂ ಬೆರೆಯುವವರು. ಅವರಲ್ಲಿ ಹೊಸತನದ ಚಿಂತನೆಯನ್ನು ಸ್ವೀಕರಿಸುವ ಮನೋಸ್ಥಿತಿ ಇದೆ. ಇದನ್ನು ಅವರ ಸಾಹಿತ್ಯಗಳಲ್ಲೂ ಕಾಣಬಹುದಾಗಿದೆ, ಆ ಕಾರಣಕ್ಕಾಗಿಯೇ ಅವರಿಂದ ಉನ್ನತವಾದ ಸಾಹಿತ್ಯಗಳು ರಚನೆಯಾಗಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು

ಪ್ರಗತಿಪರ ಕೃಷಿಕ ರಾಜೇಶ್‌ನಾಯಕ್ ಉಳಿಪಾಡಿಗುತ್ತು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಅವರ ಸಾಹಿತ್ಯಗಳನ್ನು ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದರು.

ಸಮಿತಿ ಅಧ್ಯಕ್ಷ ಕೆ. ಮೋಹನ ರಾವ್, ಸಂಚಾಲಕ ವಿಶ್ವನಾಥ್ ಬಂಟ್ವಾಳ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕರಾಮ ಪೂಜಾರಿ, ಪುರಸಭಾ ಸದಸ್ಯ ಜಗದೀಶ ಕುಂದರ್, ಸಾಹಿತಿ, ಪ್ರಾಧ್ಯಾಪಕ ಡಿ.ಬಿ.ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. ಹಿರಿಯ ಕಲಾವಿದ ಮಂಜು ವಿಟ್ಲ ಸ್ವಾಗತಿಸಿದರು, ಸಮಿತಿ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ವಂದಿಸಿದರು, ಸಾಹಿತಿ, ಪ್ರಾಧ್ಯಾಪಕ ವಿ.ಸು.ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ