ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ – ಮಾಣಿಯಲ್ಲಿ ಸಿದ್ದತಾ ಸಭೆ

www.bantwalnews.com

ಜಾಹೀರಾತು

ದ.ಕ.ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ, ಹಾಗು ಸಹಬಾಳೈಯ ಜೀವನವನ್ನು ಸದೃಡಗೊಳಿಸುವ ನಿಟ್ಟಿನಲ್ಲಿ ಡಿ.12 ರಂದು ಹಮ್ಮಿಕೊಂಡ ಫರಂಗಿಪೇಟೆಯಿಂದ ಮಾಣಿ ವರೆಗಿನ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಾಜ್ಯ ಅರಣ್ಯ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು.

ಮಾಣಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ರಾತ್ರಿ ನಡೆದ ನಡಿಗೆ ಕಾರ್ಯಕ್ರಮದ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಆವರು ದ.ಕ.ಜಿಲ್ಲೆಯ ಜನತೆ ಧರ್ಮದ,ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ ಪರಸ್ಪರ ದ್ವೇಷಿಸುವಂತೆ ಮಾಡಲು ಸಹಕಾರ ನೀಡುವುದಿಲ್ಲ ಎಂಬ ಸಂದೇಶವನ್ನು ನೀಡಬೇಕಾಗಿದೆ ಎಂದರು.

ಜಾಹೀರಾತು

ಡಿವೈಎಫ್ಐ ಜಿಲ್ಲಾದ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಸಾಮರಸ್ಯ ಬದುಕಿಗೆ ಯಾವುದೇ ರೀತಿಯ ಚ್ಯುತಿಯಾಗದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಈ ನಿಟ್ಟಿನಲ್ಲಿ ಸಮಾನ ಮನಸ್ಕರೆಲ್ಲರೂ ಪಕ್ಷ ಬೇದ ಮರೆತು ಒಂದಾದ್ದೇವೆ ಹೊರತು ಯಾವುದೇ ರೀತಿಯ ರಾಜಕೀಯ ಉದ್ದೇಶ ಇಲ್ಲ ಎಂದರು.

ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮುಹಮ್ಮದ್. ಮಂಜುಳ ಮಾವೆ. ತಾ.ಪಂ.ಉಪಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬೂಡ ಅದ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ಮೋಹನಚಂದ್ರ ನಂಬಿಯಾರ್, ಪ್ರಶಾಂತ ಕುಲಾಲ್,ಮಾದವ ಮಾವೆ, ಕುಶಲ ಎಂ ಪೆರಾಜೆ, ಶ್ರೀದರ ರೈ ಕುರ್ಲೆತ್ತಿಮಾರ್, ಜಯಂತಿ ಪೂಜಾರಿ, ಚಂದ್ರಶೇಖರ ರೈ, ಮಲ್ಲಿಕಾ ಪಕ್ಕಳ, ಮಹೇಶ್ ನಾಯಕ್, ವಿಜಯ ಏಮಾಜೆ, ಸುದೀಪ್ ಕುಮಾರ್, ಕೊರಗಪ್ಪ ಪೂಜಾರಿ ಮಾಣಿ, ಮೊದಲಾದವರು ಉಪಸ್ತಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ – ಮಾಣಿಯಲ್ಲಿ ಸಿದ್ದತಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*