ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ರಂಗಗಳಲ್ಲೂ ದುಡಿದ ಹಿರಿಯ ಸಾಹಿತಿ, ಸಂಘಟಕ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸಾರ್ವಕಾಲಿಕ ವ್ಯಕ್ತಿ, ಅವರ ಸಾಧನೆ ಪರಿಚಯ ಕೆಲಸ ಅಭಿನಂದನಾರ್ಹ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಡಿ. 16ರಂದು ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ನೆನಪಿನ ಏರ್ಯ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಬಿ.ಸಿ.ರೋಡಿನಲ್ಲಿ ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮವನ್ನು ಸಾರ್ವಜನಿಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಡಾ. ಏರ್ಯ ಸಾಹಿತ್ಯ ಸಮಿತಿ ಸಂಚಾಲಕ ವಿಶ್ವನಾಥ ಬಂಟ್ವಾಳ, ಹಿರಿಯ ರಂಗಕರ್ಮಿ ಮಂಜುವಿಟ್ಲ, ಮಹಾಬಲೇಶ್ವರ ಟಿ. ಹೆಬ್ಬಾರ್, ಸೇವಾಂಜಲಿ ಪ್ರತಿಷ್ಠಾನದ ಮುಖ್ಯಸ್ಥ ಕೆ.ಕೆ. ಪೂಂಜ, ಸಂಘಟಕ ಪ್ರೀತಿ ಕಿಶೋರ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ಈ ಸಂದರ್ಭದಲ್ಲಿ ಹಾಜರಿದ್ದರು.