ಜಿಲ್ಲಾ ಸುದ್ದಿ

ನಸುಕಿನ ವೇಳೆಗೇ ಅಧಿಕಾರಿಗಳಿಗೆ ಶಾಕ್ ನೀಡಿದ ಎಸಿಬಿ

  • ಬಂಟ್ವಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನೆ, ಕಚೇರಿಗೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ, ದಾಖಲೆ ಪರಿಶೀಲನೆ, ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ

www.bantwalnews.com

ಜಾಹೀರಾತು

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಾಜ್ಯದ ವಿವಿಧೆಡೆ ಬುಧವಾರ ನಸುಕಿನ ವೇಳೆ ಹಲವು ಅಧಿಕಾರಿಗಳ ಮನೆಗಳಿಗೆ ದಾಳಿ ನಡೆಸಿ ಶಾಕ್ ನೀಡಿದೆ. ಇವರಲ್ಲಿ ಬಂಟ್ವಾಳ ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಫ್. ಮಿರಾಂಡ ಅವರ ಪಕ್ಷಿಕೆರೆ, ತೋಕೂರುನಲ್ಲಿರುವ ಮನೆ ಹಾಗೂ ಬಂಟ್ವಾಳದ ಕಚೇರಿಗೆ ದಾಳಿ ನಡೆಸಿರುವ ಡಿವೈಎಸ್ಪಿ ಸುಧೀರ್ ಹೆಗ್ಡೆ ಮತ್ತು ಡಿವೈಎಸ್ಪಿ ಗಿರೀಶ್ ನೇತೃತ್ವದ ಕಾರ್ಯಾಚರಣೆ ತಂಡ ದಾಖಲೆಗಳನ್ನು ಕಲೆ ಹಾಕುತ್ತಿದೆ. ವಿವಿಧೆಡೆ ಮಿರಾಂಡಾ ಮಾಡಿರುವ ಆಸ್ತಿಪಾಸ್ತಿಗಳ ಲೆಕ್ಕಾಚಾರ, ಕಚೇರಿ ಕಂಪ್ಯೂಟರ್ ನ ಹಾರ್ಡ್ ಡಿಸ್ಕ್ ಪರಿಶೀಲನೆ ಸಹಿತ ಹಲವು ಪ್ರಮುಖ ದಾಖಲೆಗಳ ಪರಿಶೀಲನೆ ನಡೆದಿದೆ.

ಇದೇ ವೇಳೆ ತುಮಕೂರಿನ ಕೊರಟಗೆರೆ ಪಿಡಬ್ಲುಡಿ ಎಇಇ ಜಗದೀಶ್, ಬಳ್ಳಾರಿ ಪ್ರದೇಶಾಭಿವೃದ್ಧಿ ನಿಗಮ ಅಧಿಕಾರಿಯ ಮನೆ, ಧಾರವಾಡ ನಗರ ಎಸಿಎಫ್ ಮನೆ, ಕಲಬುರ್ಗಿ ಸಣ್ಣ ನೀರಾವರಿ ವಿಭಾಗ ಎಕ್ಸಿಕ್ಯುಟಿವ್ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ.

ಜಾಹೀರಾತು

ಬೆಳಗಾವಿಯ ಅಂಕೋಲಾ ವಲಯದ ಎಸಿಎಫ್ ಅವರ ಹುಬ್ಬಳ್ಳಿಯ ಗಂಗಾಧರ ನಗರ, ಧಾರವಾಡದ ಕಲಗೇರಿಯಲ್ಲಿರುವ ನಿವಾಸ ಹಾಗೂ ಬೆಳಗಾವಿ ಸಮೀಪವಿರುವ ಫಾರ್ಮ್ ಹೌಸ್ ಮೇಲೆ ಏಕ ಕಾಲಕ್ಕೆ ಐವರು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗಾವಿಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಅವರಿಗೂ ಎಸಿಬಿ ಶಾಕ್ ನೀಡಿದೆ. ಹುಬ್ಬಳ್ಳಿ, ಧಾರವಾಡ, ದಾವಣಗೆರೆ ಸೇರಿದಂತೆ ವ್ಯವಹಾರ ಹೊಂದಿರುವ ಸ್ಥಳಗಳ ಮೇಲೆ ದಾಳಿ ನಡೆದಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ