ಜೋಡುಮಾರ್ಗ ನೇತ್ರಾವತಿ ಜೇಸಿ ಮತ್ತೆ ಕಾರ್ಯಾರಂಭ

www.bantwalnews.com

ಬಿ.ಸಿ.ರೋಡ್ ಸಹಿತ ಬಂಟ್ವಾಳ ತಾಲೂಕಿನಾದ್ಯಂತ ವ್ಯಕ್ತಿತ್ವವಿಕಸನ, ತರಬೇತಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಮೂಲಕ ಜನಪರ ಹಾಗೂ ಜನಪ್ರಿಯವಾಗಿದ್ದ ಜೋಡುಮಾರ್ಗ ನೇತ್ರಾವತಿ ಜೇಸಿ ಮತ್ತೆ ಕಾರ್ಯೋನ್ಮುಖವಾಗಿದೆ.

ಜಾಹೀರಾತು

ಮಂಗಳೂರು ಜೇಸಿ ಸಾಮ್ರಾಟ್ ಅಧ್ಯಕ್ಷ ರಾಘವೇಂದ್ರ ಹೊಳ್ಳ ನೇತೃತ್ವದಲ್ಲಿ ಜೋಡುಮಾರ್ಗ ಜೇಸಿಯ ಎಲ್ಲ ಪೂರ್ವ ಸದಸ್ಯರನ್ನು ಒಗ್ಗೂಡಿಸಿ, ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಡಿಸೆಂಬರ್ 10ರಂದು ಸಂಜೆ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಜೇಸಿ ಮಂಗಳೂರು ಸಾಮ್ರಾಟ್ ಪ್ರಾಯೋಜಿತ ಜೋಡುಮಾರ್ಗ ನೇತ್ರಾವತಿ ಜೇಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸವಿತಾ ನಿರ್ಮಲ್ ಅವರಿಗೆ ರಾಘವೇಂದ್ರ ಹೊಳ್ಳ ಪದಗ್ರಹಣ ನೆರವೇರಿಸಿದರು.

ಕಾರ್ಯದರ್ಶಿ ಅಜಿತ್ ಜಿ. ಜೋಷಿ, ಕೋಶಾಧಿಕಾರಿ ನವೀನ್ ಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಸತ್ಯನಾರಾಯಣ ರಾವ್, ಶುಭ ಆನಂದ ಬಂಜನ್, ಹರಿಪ್ರಸಾದ್, ನಿರ್ದೇಶಕರಾಗಿ ಹರ್ಷರಾಜ್ ಸಿ, ವಸಂತ್, ಹರೀಶ ಮಾಂಬಾಡಿ, ಕೃಷ್ಣರಾಜ್ ಭಟ್, ಮೊಹಮ್ಮದ್ ಪಿ ಅವರಿಗೆ ಅಧ್ಯಕ್ಷೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಲಹೆಗಾರರಾಗಿ ಆಯ್ಕೆಗೊಂಡ ಬಿ.ರಾಮಚಂದ್ರ ರಾವ್, ವೃಷಭರಾಜ ಜೈನ್, ಜಯಾನಂದ ಪೆರಾಜೆ, ಜ್ಯೋತೀಂದ್ರಪ್ರಸಾದ್ ಶೆಟ್ಟಿ, ರಾಮದಾಸ ಬಂಟ್ವಾಳ, ಉಮೇಶ್ ನಿರ್ಮಲ್ ಹಾಗೂ ಅಹಮದ್ ಮುಸ್ತಫಾ ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಜೇಸಿ ವಲಯಾಧ್ಯಕ್ಷ ರಾಕೇಶ್ ಕುಂಜೂರು ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ಜೇಸಿ ಆಂದೋಲನಕ್ಕೆ ಅಧಿಕ ಸಂಖ್ಯೆಯಲ್ಲಿ ಯುವಜನರು ಸೇರ್ಪಡೆಗೊಳ್ಳಬೇಕು ಎನ್ನುವುದು ತನ್ನ ಆಶಯ ಎಂದರು.

ಮುಖ್ಯ ಅತಿಥಿಗಳಾಗಿ ಜೇಸಿ ವಲಯಉಪಾಧ್ಯಕ್ಷ ಪಶುಪತಿ ಶರ್ಮಾ, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಹಶೀಲ್ದಾರ್ ಪುರಂದರ ಹೆಗ್ಡೆ ಹಾಗೂ ಜೇಸಿ ಇಂಡಿಯಾ ಫೌಂಡೇಶನ್ ನಿರ್ದೇಶಕ ವೈ. ಸುಕುಮಾರ್, ಮಂಗಳೂರು ಸಾಮ್ರಾಟ್ ಜೇಸಿ ಕಾರ್ಯದರ್ಶಿ ವೆಂಕಟರಮಣ ಭಾಗವಹಿಸಿದ್ದರು.

ಜೋಡುಮಾರ್ಗ ನೇತ್ರಾವತಿ ಜೇಸಿ ವ್ಯಕ್ತಿತ್ವ ವಿಕಸನ, ತರಬೇತಿ ಹಾಗೂ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಕ್ರಿಯಾಶೀಲವಾಗಲಿ ಎಂದು ಅತಿಥಿಗಳು ಶುಭ ಹಾರೈಸಿದರು. ಈ ಸಂದರ್ಭ ಒಟ್ಟು 15 ನೂತನ ಸದಸ್ಯರ ಸೇರ್ಪಡೆ ನಡೆಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜೋಡುಮಾರ್ಗ ನೇತ್ರಾವತಿ ಜೇಸಿ ಮತ್ತೆ ಕಾರ್ಯಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*