ಬಂಟ್ವಾಳ

ಏರ್ಯ ಬದುಕು-ಬರಹ ಸಾಧನೆಗಳ ಪಕ್ಷಿನೋಟ ಬಿಡುಗಡೆ

ಜಾಹೀರಾತು

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸಾಹಿತ್ಯ ಪ್ರಕಾರವನ್ನು ದಾಖಲಿಸುವ ಐತಿಹಾಸಿಕ ಕಾರ್ಯಕ್ರಮ ಡಾ. ಏರ್ಯ ಸಾಹಿತ್ಯ ಸಂಭ್ರಮ ಸ್ವಾಗತ ಸಮಿತಿ ಆಯೋಜಿಸಿದೆ ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಹಾಗೂ ಗ್ರಾಮೀಣ ಭೂ ಅಭಿವೃದ್ಧಿ ಸಂಘದ ಅಧ್ಯಕ್ಷ ಸುದರ್ಶನ ಜೈನ್ ಅವರು ತಿಳಿಸಿದರು.

ನಮ್ಮ ಬಂಟ್ವಾಳ ಕಾರ್ಯಾಲಯದಲ್ಲಿ ಗುರುವಾರ ಡಾ. ಏರ್ಯ ಬದುಕು- ಬರಹ ಸಾಧನೆಗಳ ಪಕ್ಷಿನೋಟ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಏರ್ಯ ಸಾಹಿತ್ಯ, ಸಮಾಜ ಸೇವೆ, ಸಂಘಟನೆ ಕ್ಷೇತ್ರಗಳ ಸಾಧನೆ ಮುಂದಿನ ಪೀಳಿಗೆಗೆ ಅನಾವರಣಗೊಳ್ಳಬೇಕೆಂದು ತಿಳಿಸಿದರು.

ಜಾಹೀರಾತು

ಕೃತಿ ಸಂಪಾದಕ, ಹಿರಿಯ ರಂಗ ಕಲಾವಿದ ಮಹಾಬಲೇಶ್ವರ ಹೆಬ್ಬಾರ್ ಮಾತನಾಡಿ, ಡಿ.16ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಬೆಳಗ್ಗೆ 9.30ರಿಂದ ಸಂಜೆ 4.30 ತನಕ ಡಾ. ಏರ್ಯ ಸಾಹಿತ್ಯ ಸಂಭ್ರಮ ನಡೆಯಲಿದ್ದು, ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದಾರೆ‌ ಎಂದು ವಿವರಿಸಿದರು.

ಸ್ವಾಗತ ಸಮಿತಿ ಸಂಚಾಲಕ ವಿಶ್ವನಾಥ್ ಬಂಟ್ವಾಳ, ಸಂಘಟಕ ಕಿಶೋರ್ ಪ್ರೀತಿ, ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts