ರಸ್ತೆ, ವಿದ್ಯುತ್ ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ

www.bantwalnews.com

ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿನ ಆದಿ ದ್ರಾವಿಡ ಜನಾಂಗದ ಪರಿಶಿಷ್ಟ ಜಾತಿಯ ಕಾಲೋನಿಗೆ ರಸ್ತೆ ಹಾಗೂ ವಿದ್ಯುತ್ ದಾರಿ ದೀಪದ ಸೌಲಭ್ಯ ಒದಗಿಸಿಲ್ಲ ಎಂದು ಆರೋಪಿಸಿ ಸ್ಥಳೀಯರು ಗುರುವಾರ ಪುರಸಭಾ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಜಾಹೀರಾತು

ಬಂಟ್ವಾಳ ಕ್ಷೇತ್ರ ಬಿಜೆಪಿ ಎಸ್.ಎಸ್ಸಿ ಮೋರ್ಚಾ ಅಧ್ಯಕ್ಷ ಗಂಗಾಧರ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಕಾಲೋನಿಗೆ ರಸ್ತೆ, ದಾರಿದೀಪ ಅಳವಡಿಸುವಂತೆ ಅನುದಾನ ಮೀಸಲಿಟ್ಟರೂ ಪುರಸಭೆಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಂಗಾಧರ್ ಆರೋಪಿಸಿದ್ದಾರೆ.

ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತಲ್ಲದೆ,ಪ.ಪಂ.ಮತ್ತು ಪ.ಜಾತಿಯ ಬಹುತೇಕ ಸಭೆಯಗಳಲ್ಲೂ ಚರ್ಚಿಸಲಾಗಿತ್ತು .ಆದರೂ ಇದರ ಅನುಷ್ಠಾನಕ್ಕೆ ಪುರಸಭೆ ಮುಂದಾಗಿಲ್ಲ ಎಂದು ಗಂಗಾಧರ್ ಆರೋಪಿಸಿದರು.

ಜಾಹೀರಾತು

ಗಂಗಾಧರ್ ಪುರಸಭೆಯ ಅವರಣದಲ್ಲಿ ಪ್ರತಿಭಟನೆ ಮುಂದಾಗುತ್ತಿದ್ದಂತೆ ಬಂದೋಬಸ್ತಿನಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಗೇಟ್ ಒಳಗಡೆ ಪ್ರವೇಶಕ್ಕೆ‌ ತಡೆದರು. ಇದರಿಂದ ಆಕ್ರೋಶಿತರಾದ ಗಂಗಾಧರ್ ನೇರ ಎಸ್.ಎಸ್ಸಿ ಸೆಲ್ ನ ಎಸ್ಪಿ ಡಾ ವೇದಮೂರ್ತಿಯವರಿಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು . ಪ್ರತಿಭಟನೆಗೆ ದಲಿತರಿಗೆ ಹೊರಗಡೆ ಅವಕಾಶ, ಉಳಿದವರಿಗೆ ಹೊರಗಡೆಯೇ ಇದೆಂತಹ ನೀತಿ ಎಂದು ಪ್ರಶ್ನಿಸಿದರು.

ಗಂಗಾಧರ್ ಅವರು ಪುರಸಭೆಯ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದರೆ,ಒಳಗಡೆ ಸಾಮಾನ್ಯ ಸಭೆ ನಡೆಯುತಿತ್ತು. ಬಳಿಕ ಮುಖ್ಯಾಧಿಕಾರಿ ಪ್ರತಿಭಟನಾಕಾರರಿಂ ಮನವಿ ಸ್ವೀಕರಿಸಿ, ಶೀಘ್ರವೇ ಕಾಮಗಾರಿ ಕೈಗೆತ್ತಿಗೊಳ್ಳವ ಭರವಸೆಯಂತೆ ಪ್ರತಿಭಟನೆ ವಾಪಾಸ್ ಪಡೆದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಸ್ತೆ, ವಿದ್ಯುತ್ ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*