ಬಂಟ್ವಾಳ

ಮನೆ ನಿವೇಶನ ಜೊತೆಗೆ ವಸತಿಗೂ ಆದ್ಯತೆ: ರಮಾನಾಥ ರೈ

ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಬಸವ ವಸತಿ ಯೋಜನೆ ಸಹಿತ ರಾಜೀವ ಗಾಂಧಿ ವಸತಿ ನಿಗಮ ಮತ್ತಿತರ ಯೋಜನೆಯಡಿ ಜನತೆಗೆ ಮನೆ ನಿವೇಶನ ಜೊತೆಗೆ ಸರ್ಕಾರವು ವಸತಿ ನಿರ್ಮಿಸಲು ಕೂಡಾ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.


ಬಂಟ್ವಾಳ ಪುರಸಭೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಸತಿ ಮಂಜೂರಾತಿ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಪುರಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು ರೂ 10 ಕೋಟಿಗೂ ಮಿಕ್ಕಿ ಅನುದಾನ ಒದಗಿಸಿದ್ದಾರೆ ಎಂದರು.

ಜಾಹೀರಾತು

ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ವಸತಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ರೂ 1.20 ಲಕ್ಷ ಮತ್ತು ಕೇಂದ್ರ ಸರ್ಕಾರದಿಂದ ರೂ 1.50 ಲಕ್ಷ ಹೀಗೆ ಒಟ್ಟು ರೂ 2.70 ಲಕ್ಷ ವೆಚ್ಚದಲ್ಲಿ ಒಟ್ಟು 700 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಿಸಲು ನಾಲ್ಕು ಹಂತದಲ್ಲಿ ಸಹಾಯಧನ ಬಿಡುಗಡೆಯಾಗುತ್ತದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಮೇಲ್ವಿಚಾರಕಿ ಉಮಾವತಿ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಜಗದೀಶ ಕುಂದರ್, ಪ್ರವೀಣ ಬಿ., ಮಹಮ್ಮದ್ ಶರೀಫ್, ನಾರ್ಬರ್ಟ್ ಡಿಸೋಜ, ವಸಂತಿ ಚಂದಪ್ಪ, ಜೆಸಿಂತಾ ಡಿಸೋಜ ಮತ್ತು ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts