ಬಂಟ್ವಾಳ

ಎಸ್.ವಿ.ಎಸ್.ಕಾಲೇಜಿನಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ


ಸ್ಪರ್ಧೆಗಳನ್ನು ಸಹಜ ಮತ್ತು ಸ್ಫರ್ಧಾತ್ಮಕ ಮನೋಭಾವದಿಂದ ಸ್ವೀಕರಿಸುವುದು ಮುಖ್ಯ. ತರಗತಿಯೊಳಗಿನ ಶಿಕ್ಷಣ ಒಂದೇ ಜೀವನವನ್ನು ರೂಪಿಸುವುದಿಲ್ಲ. ತರಗತಿಯ ಹೊರಗಿನ ಪರಿಸರವೂ ಕೂಡ ಜೀವನವನ್ನು ರೂಪಿಸಲು ಮುಖ್ಯವಾಗಿರುತ್ತದೆ. ಸ್ಫರ್ಧೆಗಳು ಮಾನವೀಯ ಮೌಲ್ಯಗಳನ್ನು ಹೆಚ್ಚಿಸುವಂತಿರಬೇಕು ಎಂದು ಕುಂಬಳೆಯ ಸೈಂಟ್ ಮೋನಿಕಾ ಆಂಗ್ಲ ಮಾಧ್ಯಮ ಸ್ಕೂಲ್ ಸಂಚಾಲಕರಾದ ರೆವರೆಂಡ್ ಫಾ. ಮಾರ್ಸೆಲ್ ಸಲ್ದಾನ ಹೇಳಿದರು..

ಬಂಟ್ವಾಳದ ಶ್ರಿ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ಎಸ್‌ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಂಟ್ವಾಳ ತಾಲೂಕು ಮಟ್ಟದ ರಸಪ್ರಶ್ನೆ ’ಸಿದ್ಧಾಂತ್- ೨೦೧೭’ ರನ್ನು ಉದ್ಘಾಟಿಸಿ ಮಾತನಾಡಿದರು

ಜಾಹೀರಾತು

ಶ್ರ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಇದನ್ನು ಆಯೋಜಿಸಿದ್ದು, ತಾಲೂಕಿನ ೨೨ ಪ್ರೌಢಶಾಲೆಯ ೧೯೬೦ ವಿದ್ಯಾರ್ಥಿಗಳು ಭಾಗವಹಿಸಿದ್ದರು

ಕಾರ್ಯಕ್ರಮವನ್ನು ೨ ಹಂತದಲ್ಲಿ ಆಯೋಜಿಸಲಾಯಿತು. ಮೊದಲ ಹಂತವನ್ನು ಆಯಾ ಪ್ರೌಢಶಾಲೆಯಲ್ಲಿ ಆಯೋಜಿಸಿ, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೋಲ್ಡನ್ ಟಿಕೆಟ್ ಟು ಸಿದ್ಧಾಂತ್ ನೀಡಲಾಯಿತು. ಅಂತಿಮ ಹಂತದಲ್ಲಿ ೨೧ ಪ್ರೌಢಶಾಲೆಯ ೪೨ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲPರಾದ ಕೂಡಿಗೆ ಪ್ರಕಾಶ್ ಶೆಣೈ ಮಾತನಾಡಿ ’ಸಿದ್ಧಾಂತ್-೨೦೧೭’ ರ ಆಯೋಜಕರನ್ನು ಅಭಿನಂಧಿಸುತ್ತಾ ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಮೂಡಿಬರಲಿ ಎಂದು ಆಶಿಸಿದರು

ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್, ಕಾರ್ಯಕ್ರಮದ ಸಂಯೋಜಕಿ ಅಖಿಲಾ ಪೈ ಮತ್ತು ವಿದ್ಯಾರ್ಥಿ ಸಂಯೋಜಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಯೋಜಕ ಚರಿತ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗ್ರೀಷ್ಮಾ ಸಲ್ಮಾ ವೇಗಸ್ ವಂದಿಸಿದರು. ನವ್ಯಾ ಕಿಣಿ ಕಾರ್ಯಕ್ರಮವನ್ನು ನಿರೂಪಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

40 minutes ago