ವಿಟ್ಲ

ಪಾದಚಾರಿ ಬಾಲಕ ಪಿಕಪ್ ಡಿಕ್ಕಿಯಾಗಿ ಮೃತ

ಮಸೀದಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬೋಳಂತೂರು ಗ್ರಾಮದ ಕೆ.ಪಿ ಬೈಲು ನಿವಾಸಿ ಬಶೀರ್ ಅವರ ಪುತ್ರ ಮಹಮ್ಮದ್ ಖೈಸ್(11) ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ.

ಬೋಳಂತೂರು ಕೆ.ಪಿ ಬೈಲು ಎಂಬಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಬೋಳಂತೂರು ಸಮೀಪದ ಕೆ.ಪಿ ಬೈಲು ಎಂಬಲ್ಲಿ ಈದ್ ಮೀಲಾದ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೋಳಂತೂರು ಕಡೆಯಿಂದ ಬಂದ ಪಿಕಪ್ ವಾಹನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುಲಾಗಿದ್ದರೂ ಅಷ್ಟೊತ್ತಿಗೆ ಮೃತಪಟ್ಟಿದ್ದಾರೆ. ಈತ ಸುರಿಬೈಲ್ ಅಶ್-ಅರಿಯ್ಯದಲ್ಲಿ ೫ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕೆ.ಪಿ ಬೈಲ್ ಮದರಸದಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದರು.

ಜಾಹೀರಾತು

ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ