ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ

ವೇತನ ಪಾವತಿಗೆ ಆಗ್ರಹಿಸಿ ಬಂಟ್ವಾಳ ತಾಲೂಕು ಅಂಗನವಾಡಿ ನೌಕರರ ಧರಣಿ ಸತ್ಯಾಗ್ರಹ ಬಿ.ಸಿ.ರೋಡಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರ ಕಚೇರಿ ಮುಂಭಾಗ ನಡೆಯಿತು.


ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಕಾರರು ಆರಂಭದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಕಚೇರಿ ಮುಂಭಾಗ ಧರಣಿ ಕುಳಿತರು.

ಜಾಹೀರಾತು

ಮಾತೃಪೂರ್ಣ ಯೋಜನೆಯ ಅನುಷ್ಠಾನ ಕ್ರಮಗಳನ್ನು ಮಾರ್ಪಾಡುಗೊಳಿಸಬೇಕು, ಇದಕ್ಕಾಗಿ ಜಂಟಿ ಬ್ಯಾಂಕ್ ಖಾತೆ ತೆರೆಯಲು ಒತ್ತಡ ಹಾಕಬಾರದು, ಪ್ಲಾಸ್ಟಿಕ್ ಕಸ ವಸ್ತುಗಳ ಸಂಗ್ರಹ ಮತ್ತು ವಿಲೇವಾರಿ ಕೆಲಸಗಳಿಂದ ಮುಕ್ತಿ ನೀಡಬೇಕು, ಆರೋಗ್ಯ ವಿಮೆ ಶೀಘ್ರ ಜಾರಿಗೊಳಿಸಬೇಕು, ಮಾರುಕಟ್ಟೆ ದರದಂತೆ ಮೊಟ್ಟೆ, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳ ಖರೀದಿಗೆ ಹಣಕಾಸು ಒದಗಿಸಬೇಕು, ಇಲ್ಲವೇ ಇಲಾಖೆಯೇ ನೇರವಾಗಿ ಇದನ್ನು ಪೂರೈಸಬೇಕು, ಇಲಾಖೇತರ ಕೆಲಸಗಳನ್ನು ನೀಡಬಾರದು ಮೊದಲಾದ ಹಲವು ಬೇಡಿಕೆಗಳನ್ನು ಈ ಸಂಧರ್ಭದಲ್ಲಿ ಮುಂದಿಡಲಾಯಿತು. ಸಂಘದ ಅಧ್ಯಕ್ಷೆ ಉಮಾವತಿ ಬಾಳ್ತಿಲ ಪ್ರತಿಭಟನಕಾರರ ಬೇಡಿಕೆಯನ್ನು ಇಲಾಕಾಧಿಕಾರಿಗಳ ಮುಂದಿಟ್ಟರು. ಸ್ಥಳಕ್ಕೆ ಪ್ರಭಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗಾಯತ್ರಿ ಕಂಬಳಿ ಭೇಟಿ ನೀಡಿ ಪ್ರತಿಭಟನಕಾರರ ಅಹವಾಲು ಸ್ವೀಕರಿಸಿ ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಶೀಘ್ರ ಪರಿಹರಿಸುವ ಭರವಸೆ ನೀಡಿದರು. ಜಿ.ಪಂ. ಸದಸ್ಯೆ ಮಂಜುಳ ಮಾಧವ ಮಾವೆ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಧವ ಮಾವೆ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*