ಬಂಟ್ವಾಳ

ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ

ವೇತನ ಪಾವತಿಗೆ ಆಗ್ರಹಿಸಿ ಬಂಟ್ವಾಳ ತಾಲೂಕು ಅಂಗನವಾಡಿ ನೌಕರರ ಧರಣಿ ಸತ್ಯಾಗ್ರಹ ಬಿ.ಸಿ.ರೋಡಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರ ಕಚೇರಿ ಮುಂಭಾಗ ನಡೆಯಿತು.


ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಕಾರರು ಆರಂಭದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಕಚೇರಿ ಮುಂಭಾಗ ಧರಣಿ ಕುಳಿತರು.

ಜಾಹೀರಾತು

ಮಾತೃಪೂರ್ಣ ಯೋಜನೆಯ ಅನುಷ್ಠಾನ ಕ್ರಮಗಳನ್ನು ಮಾರ್ಪಾಡುಗೊಳಿಸಬೇಕು, ಇದಕ್ಕಾಗಿ ಜಂಟಿ ಬ್ಯಾಂಕ್ ಖಾತೆ ತೆರೆಯಲು ಒತ್ತಡ ಹಾಕಬಾರದು, ಪ್ಲಾಸ್ಟಿಕ್ ಕಸ ವಸ್ತುಗಳ ಸಂಗ್ರಹ ಮತ್ತು ವಿಲೇವಾರಿ ಕೆಲಸಗಳಿಂದ ಮುಕ್ತಿ ನೀಡಬೇಕು, ಆರೋಗ್ಯ ವಿಮೆ ಶೀಘ್ರ ಜಾರಿಗೊಳಿಸಬೇಕು, ಮಾರುಕಟ್ಟೆ ದರದಂತೆ ಮೊಟ್ಟೆ, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳ ಖರೀದಿಗೆ ಹಣಕಾಸು ಒದಗಿಸಬೇಕು, ಇಲ್ಲವೇ ಇಲಾಖೆಯೇ ನೇರವಾಗಿ ಇದನ್ನು ಪೂರೈಸಬೇಕು, ಇಲಾಖೇತರ ಕೆಲಸಗಳನ್ನು ನೀಡಬಾರದು ಮೊದಲಾದ ಹಲವು ಬೇಡಿಕೆಗಳನ್ನು ಈ ಸಂಧರ್ಭದಲ್ಲಿ ಮುಂದಿಡಲಾಯಿತು. ಸಂಘದ ಅಧ್ಯಕ್ಷೆ ಉಮಾವತಿ ಬಾಳ್ತಿಲ ಪ್ರತಿಭಟನಕಾರರ ಬೇಡಿಕೆಯನ್ನು ಇಲಾಕಾಧಿಕಾರಿಗಳ ಮುಂದಿಟ್ಟರು. ಸ್ಥಳಕ್ಕೆ ಪ್ರಭಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗಾಯತ್ರಿ ಕಂಬಳಿ ಭೇಟಿ ನೀಡಿ ಪ್ರತಿಭಟನಕಾರರ ಅಹವಾಲು ಸ್ವೀಕರಿಸಿ ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಶೀಘ್ರ ಪರಿಹರಿಸುವ ಭರವಸೆ ನೀಡಿದರು. ಜಿ.ಪಂ. ಸದಸ್ಯೆ ಮಂಜುಳ ಮಾಧವ ಮಾವೆ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಧವ ಮಾವೆ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.