ವಿಟ್ಲದ ಮೇಗಿನಪೇಟೆ ಅಲ್ಖೈರ್ ಶರೀಯತ್ ಕಾಲೇಜಿನಲ್ಲಿ ಈದ್ ಮೀಲಾದ್ ಕಾರ್ಯಕ್ರಮ ಕಾಲೇಜು ವಠಾರದಲ್ಲಿ ಇತ್ತೀಚೆಗೆ ನಡೆಯಿತು.
ಬೆಳಿಗ್ಗೆ ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಅಬ್ದುಲ್ ಸಲಾಂ ಲತೀಫಿ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಅಬ್ದುಲ್ ರಹಿಮಾನ್ ಫೈಝಿ, ಹಾಗೂ ಅಬ್ಬಾಸ್ ದಾರಿಮಿ ಅವರ ದುವಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಾಹೀರಾತು
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೆಲ್ಕಾರ್ ಮಹಿಳಾ ಕಾಲೇಜಿನ ಉಪನ್ಯಾಸಕಿ ಶಹನಾಝ್ ಪುರ್ಖಾನಿ ಅವರು ಇಸ್ಲಾಮಿನಲ್ಲಿ ಮಹಿಳೆಯರ ಜೀವನ ಕ್ರಮದ ಬಗ್ಗೆ ಪ್ರವಚನ ನೀಡಿದರು.
ಬಳಿಕ ಕಾಲೇಜು ವಿದ್ಯಾರ್ಥಿನಿಗಳಿಂದ ಭಾಷಣ, ಪ್ರಬಂಧ ಮಂಡನೆ, ಅಧ್ಯಯನ ಕ್ಲಾಸ್, ಬುರ್ದಾ, ಮಜ್ಲಿಸುನ್ನೂರ್ ಮುಂತಾದ ಕಾರ್ಯಕ್ರಮಗಳು ನಡೆಯಿತು.
ವಿದ್ಯಾರ್ಥಿನಿಗಳಾದ ಸಹ್ಲ, ಮುರ್ಶಿದಾ, ಅರ್ಶಿದಾ ಸ್ವಾಗತಿಸಿದರು. ಮೆಹನಾಝ್ ಬಾನು ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲದ ಮೇಗಿನಪೇಟೆ ಅಲ್ಖೈರ್ ಶರೀಯತ್ ಕಾಲೇಜಿನಲ್ಲಿ ಈದ್ ಮೀಲಾದ್ ಕಾರ್ಯಕ್ರಮ"