ಬಂಟ್ವಾಳ

ದುಷ್ಕರ್ಮಿಗಳ ಬಂಧನಕ್ಕೆ ಸಿಎಫ್‌ಐ ಒತ್ತಾಯ

ಬಿಜಾಪುರದ ಜಯಪುರದಲ್ಲಿ ದಲಿತ ಸಮುದಾಯದ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ಘಟಕದ ವತಿಯಿಂದ ಶುಕ್ರವಾರ ಸಂಜೆ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಧರಣಿ ನಡೆಯಿತು.

ಜಾಹೀರಾತು

ಸಿಎಫ್‌ಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮಾತನಾಡಿ, ಈಗಾಗಲೇ ದೇಶದಾದ್ಯಂತ ಹಲವಾರು ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ವಿದ್ಯಾರ್ಥಿನಿ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೆ ವಿದ್ಯಾರ್ಥಿಗಳು ಮಾದಕ ವ್ಯಸಗಳಿಗೆ ತುತ್ತಾಗುತ್ತಿದ್ದು, ಸರಕಾರ ಇದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದರು.

ಬಿಜಾಪುರದ ಜಯಪುರದಲ್ಲಿ ದಲಿತ ಸಮುದಾಯದ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವನ್ನು ಎಸಗಿ, ಕೊಲೆ ಮಾಡಿರುವುದು ನೀಚ ಕೃತ್ಯವಾಗಿದೆ. ಸರಕಾರ ಈ ಪ್ರಕರಣನ್ನು ಗಂಭೀರವಾಗಿ ಪರಿಗಣಿಸಿ, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆ ನಡೆಯದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಪಿ.ಜೆ., ಬಂಟ್ವಾಳ ವಲಯ ಅಧ್ಯಕ್ಷ ನಬೀಲ್, ಫಹದ್ ಉಪಸ್ಥಿತರಿದ್ದರು. ನಾಸಿರ್ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ