ಬಂಟ್ವಾಳ

ಕೆದಿಲ: ಪಿಸ್ತೂಲ್, ಚೂರಿ ತೋರಿಸಿ ದರೋಡೆ

www.bantwalnews.com

ಕೆದಿಲ ದೈವಸ್ಥಾನ ಬಳಿಯ ಮನೆಯೊಂದಕ್ಕೆ ಶುಕ್ರವಾರ ರಾತ್ರಿ ಮೂವರು ಅಪರಿಚಿತರು ಆಗಮಿಸಿ, ಪಿಸ್ತೂಲು ಹಾಗೂ ಚೂರಿ ತೋರಿಸಿ, ಮನೆಯವರನ್ನು ಬೆದರಿಸಿ, ಚಿನ್ನಾಭರಣ, ನಗದು ದೋಚಿದ ಘಟನೆ ಕೆದಿಲದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಜಾಹೀರಾತು

ಶಿವಶಂಕರ ಪುತ್ತೂರಾಯ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ರಾತ್ರಿ ಸುಮಾರು 7.30ಕ್ಕೆ ಆಗಮಿಸಿದ ಮೂವರು ಆಗಂತುಕರು, ಪಿಸ್ತೂಲು, ಚೂರಿ ತೋರಿಸಿ ಬೆದರಿಸಿ, ಚಿನ್ನಾಭರಣ ನೀಡುವಂತೆ ಹೇಳಿದೆ. ಬಳಿಕ ನೆಕ್ಲೇಸ್, ಕರಿಮಣಿಸರ, ಚೈನ್, ಕಿವಿಯೋಲೆ ಪಡಕೊಂಡಿದೆ. ಬೆಡ್ ರೂಮ್ ಕಪಾಟಿನಲ್ಲಿದ್ದ ನಗದು, ಮೊಬೈಲ್ ಫೋನ್ ಬಳಿಕ ಎಟಿಎಮ ಕಾರ್ಡ್ ತೆಗೆದುಕೊಂಡು, ಮನೆಯವರನ್ನು ಕಟ್ಟಿಹಾಕಿ, ಪ್ಲಾಸ್ಟರ್ ಹಾಕಿ ಪರಾರಿಯಾಗಿದೆ. ಕಟ್ಟನ್ನು ಕಷ್ಟಪಟ್ಟು ಬಿಡಿಸಿಕೊಂಢ ಮನೆಯವರು, ಸಂಬಂಧಿಕರಿಗೆ ಮಾಹಿತಿ ನೀಡಿ ಬಳಿಕ ಪುತ್ತೂರು ಠಾಣೆಗೆ ಮಾಹಿತಿ ನೀಡಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ