ಬಿಲ್ಲವರಿಂದು ತಲೆಎತ್ತಿ ನಿಲ್ಲಲು ಬ್ರಹ್ಮಶ್ರೀ ನಾರಾಯಣಗುರು ತತ್ವಾದರ್ಶ ಪಾಲಿಸಿದ ಜನಾರ್ದನ ಪೂಜಾರಿ ಕಾರಣ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಕನ್ಯಾಡಿ ಬ್ರಹ್ಮಾನಂದ ಶ್ರೀಗಳು ಮತ್ತು ಹರಿಕೃಷ್ಣ ಬಂಟ್ವಾಳ್ ಉಲ್ಲೇಖ

www.bantwalnews.com

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ ಆಚರಣೆ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮವನ್ನು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭ ಆಶೀರ್ವಚನ ನೀಡಿದ ಕನ್ಯಾಡಿ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ,ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಸಮಾಜಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಧರ್ಮದ ನೆಲೆಗಟ್ಟನ್ನು ಸಮಾಜಕ್ಕೆ ತೋರಿಸಿಕೊಟ್ಟವರು ಬ್ರಹ್ಮಶ್ರೀ ನಾರಾಯಣಗುರುಗಳು. ಸಮಾಜಕ್ಕೆ ಬೆಳಕುಚೆಲ್ಲಿದ ದಿವ್ಯಚೇತನ ಅವರು. ಎಲ್ಲ ವೇದಗಳ ಸಾರಾಂಶಗಳನ್ನು ತಂದ ದೊಡ್ಡ ಚೇತನ ನಾರಾಯಣಗುರುಗಳು. ಅವರ ನಂತರದ ದೊಡ್ಡ ದಿವ್ಯಶಕ್ತಿ ಜನಾರ್ದನ ಪೂಜಾರಿ. ನಾರಾಯಣಗುರುಗಳು ಏನೇನು ಹೇಳಿದರೋ, ಅವನ್ನೆಲ್ಲ ಮಾಡಿ ತೋರಿಸಿದವರು ಜನಾರ್ದನ ಪೂಜಾರಿ ಎಂದು ಸ್ವಾಮೀಜಿ ಹೇಳಿದರು.

ಜಾಹೀರಾತು

ಪ್ರಾಸ್ತಾವಿಕವಾಗಿ ಮಾತನಾಡಿದ ಪೂರ್ವಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಇವತ್ತು ಅದೆಷ್ಟೋ ಬಿಲ್ಲವರು, ಬಡವರು ಸ್ವಂತ ಕಾಲ ಮೇಲೆ ನಿಂತಿರುವುದರ ಹಿಂದೆ ಪೂಜಾರಿಯವರ ಶ್ರಮ ಇದೆ. ಕೋಟ್ಯಂತರ ಮಂದಿಗೆ ಉದ್ಯೋಗ ಕೊಡಿಸಿದವರು ಅವರು. ದೇಶದಲ್ಲಿ ಬಿಲ್ಲವರು ತಲೆಎತ್ತಿ ನಿಲ್ಲುವಂತೆ ಮಾಡಿದ ಪೂಜಾರಿಯವರಿಗೆ ಬೆಂಬಲ ನೀಡುವ ಛಾತಿ ಸಮುದಾಯಕ್ಕಿರಬೇಕು. ಜನಾರ್ದನ ಪೂಜಾರಿ ಅವರ ಬೆನ್ನ ಹಿಂದೆ ಬಿಲ್ಲವ ಸಮುದಾಯ ನಿಲ್ಲುವುದು ಅವರಿಗೆ ಸಲ್ಲಿಸುವ ಕೃತಜ್ಞತೆ. ಇಂದು ಬಿಲ್ಲವರು ಬಲ್ಲವರಾಗಬೇಕಾದರೆ, ರಾಜಕೀಯ ಶಕ್ತಿಯನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಜಕೀಯ ಶಕ್ತಿಯೊಂದರ ಅಗತ್ಯ ಬಿಲ್ಲವರಿಗಿದೆ. ಸಮುದಾಯದ ನೈತಿಕತೆಯನ್ನು ಕಾಪಾಡುವುದು, ಕೋಮುವಾದಿ ಸಮಾಜವನ್ನು ಸೆಕ್ಯುಲರ್ ಸಮಾಜವನ್ನಾಗಿ ಕಟ್ಟುವುದು ಮಹಿಳೆಯರಿಂದ ಸಾಧ್ಯ. ಬಿಲ್ಲವ ಮಹಿಳೆಯರು ಈ ಕುರಿತು ಗಮನಹರಿಸಬೇಕು ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.

ಸಮಾರಂಭದಲ್ಲಿ ಮಾತನಾಡಿದ ಬಿ.ಜನಾರ್ದನ ಪೂಜಾರಿ, ಕುದ್ರೋಳಿಯಲ್ಲಿ ಜನವರಿ 26ರಂದು ಆತ್ಮಚರಿತ್ರೆ ಬಿಡುಗಡೆ ಮಾಡಲಾಗುತ್ತದೆ. ಆ ದಿನ ಎಲ್ಲ ಸಮಾಜಗಳ ಬಾಂಧವರು ಬರಬೇಕು, ತನ್ನ ಜೀವನದ ವಿಚಾರಗಳನ್ನು ಹೊತ್ತುಕೊಂಡ ಹೊತ್ತಗೆಯನ್ನು ಅಂದು ಬಿಡುಗಡೆ ಮಾಡಲಾಗುತ್ತದೆ ಎಂದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಪೂರ್ವಾಧ್ಯಕ್ಷರಾದ ಡಾ. ಗಂಗಾಧರ ಮೇಲ್ಕಾರ್, ಕೆ.ಹರಿಕೃಷ್ಣ ಬಂಟ್ವಾಳ್, ಎಂ.ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಚಂಡ್ತಿಮಾರು ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಸಂಘದ ಉಪಾಧ್ಯಕ್ಷ ರಾಘವ ಅಮೀನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ವಿಜಯಾ ಬ್ಯಾಂಕ್, ಕೋಶಾಧಿಕಾರಿ ರಮೇಶ್ ಎಂ. ತುಂಬೆ, ಲೆಕ್ಕ ಪರಿಶೋಧಕರು ಸತೀಶ ಬಿ, ಕಾರ್ಯಕಾರಿ ಸಮಿತಿ ಸದಸ್ಯರಾದ ದಾಮೋದರ ಸಾಲ್ಯಾನ್, ಉಮೇಶ್ ಸುವರ್ಣ ತುಂಬೆ, ನಾರಾಯಣ ಪೂಜಾರಿ ಬೊಳ್ಳುಕಲ್ಲು, ಜಯಪ್ರಕಾಶ್ ಜೆ. ಎಸ್., ರಾಜೇಶ್ ಸುವರ್ಣ, ಬಿ. ಸಂಜೀವ ಪೂಜಾರಿ ಗುರುಕೃಪಾ, ಜನಾರ್ದನ ಸಾಲಿಯಾನ್ ದರಿಬಾಗಿಲು, ವೀರೇಂದ್ರ ಅಮೀನ್, ಹೇಮಂತ ಕುಮಾರ್, , ಸುರೇಂದ್ರ ಅಮೀನ್, ವಿಶೇಷ ಆಹ್ವಾನಿತರಾದ ಮಹಾಬಲ ಬಂಗೇರ, ಬಂಟ್ವಾಳ ತಾಲೂಕು ಬಿಲ್ಲವ ಮಹಾ ಮಂಡಲ ಪ್ರತಿನಿಧಿ ಗಂಗಾಧರ ಪೂಜಾರಿ ಬಡಗಬೆಳ್ಳೂರು, ಉಪಾಧ್ಯಕ್ಷೆ ಭಾರತಿ ಬಿ.ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

ಬೆಳಗ್ಗೆ ಗಂಟೆ ೫ರಿಂದ ವೈದಿಕ ಕಾರ್ಯಕ್ರಮಗಳು ಲೋಕೇಶ್ ಶಾಂತಿ ನೇತೃತ್ವದಲ್ಲಿ ನಡೆದವು. ಈ ಸಂದರ್ಭ ಬಿ.ತಮ್ಮಯ್ಯ ಸಂಪಾದಕತ್ವದ ಸ್ಮರಣ ಸಂಚಿಕೆ ಸ್ವರ್ಣ ಕೇದಗೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ದಂಪತಿಯನ್ನು ಸನ್ಮಾನಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಬೇಬಿಕುಂದರ್ ವಿಜಯ ಬ್ಯಾಂಕ್ ಸ್ವಾಗತಿಸಿದರು. ಕೋಶಾಧಿಕಾರಿ ರಮೇಶ್ ಎಂ. ತುಂಬೆ ವಂದಿಸಿದರು. ಪತ್ರಕರ್ತ ಆಲದಪದವು ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಲ್ಲವರಿಂದು ತಲೆಎತ್ತಿ ನಿಲ್ಲಲು ಬ್ರಹ್ಮಶ್ರೀ ನಾರಾಯಣಗುರು ತತ್ವಾದರ್ಶ ಪಾಲಿಸಿದ ಜನಾರ್ದನ ಪೂಜಾರಿ ಕಾರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*