ಪ್ಲಾಸ್ಟಿಕ್ ಬಳಸದೆ ಪರಿಸರ ಉಳಿಸಿ

ಜಾಹೀರಾತು

ಪ್ಲಾಸ್ಟಿಕ್ ಕುರಿತು ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಬರೆದಿರುವ ’ಪ್ಲಾಸ್ಟಿಕ್ ಪ್ಲಾಸ್ಟಿಕ್’ ಕೈಪಿಡಿ ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಎಚ್ಚರಿಕೆ ನೀಡುವ ಫಲಕ ಬಿ.ಸಿ.ರೋಡಿನ ಕೈಕಂಬದ ಅವರ ನಿವಾಸದಲ್ಲಿ ಬಿಡುಗಡೆಗೊಂಡಿತು.

ಫಲಕ ಬಿಡುಗಡೆಗೊಳಿಸಿದ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿ, ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಜನರು ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಿತಗೊಳಿಸಿ ಸ್ವಚ್ಛ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.

ಜಾಹೀರಾತು

ಪುಸ್ತಕ ಬಿಡುಗಡೆಗೊಳಿಸಿದ ಬಂಟ್ವಾಳ ಕನ್ನಡ ಭವನ ನಿರ್ಮಾಣ ಸಮಿತಿಯ ಸಂಚಾಲಕ ಗಂಗಾಧರ್ ಭಟ್ ಕೊಳಕೆ ಮಾತನಾಡಿ, ಸಂಘಟನೆಯೊಂದು ಮಾಡಬೇಕಾದ ಕಾರ್ಯವನ್ನು ವ್ಯಕ್ತಿಯೊಬ್ಬರು ಮಾಡುತ್ತಿರುವುದು ಪ್ರಶಂಸನೀಯ. ಇದರಲ್ಲಿ ನಾವೆಲ್ಲರೂ ರಾಜಮಣಿಯವರಿಗೆ ಸಹಕರಿಸಬೇಕಾಗಿದೆ ಎಂದರು.

ಫಲಕಗಳನ್ನು ವಿತರಿಸಿದ ಪತ್ರಕರ್ತ ರಾಜಾ ಬಂಟ್ವಾಳ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ಪುತ್ತೂರಾಯ ಹಾಗೂ ಶಾಂತಾ ದಂಪತಿಯನ್ನು ಅವರ ಸಮಾಜ ಸೇವಗಾಗಿ ಸನ್ಮಾನಿಸಲಾಯಿತು. ವಠಾರದ ನಿವಾಸಿಗಳ ಮನೆಯ ಆವರಣದ ಗೇಟುಗಳಿಗೆ ಫಲಕಗಳನ್ನು ಕಟ್ಟಲಾಯಿತು. ನವ್ಯಾ ರಾವ್ ಪ್ರಾರ್ಥಿಸಿ, ರಾಜಮಣಿ ರಾಮಕುಂಜ ಆಶಯ ಮಾತುಗಳೊಂದಿಗೆ ಸ್ವಾಗತಿಸಿ, ಮೇಧಾ ರಾಮಕುಂಜ ವಂದಿಸಿದರು. ಧಾತ್ರಿ ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ್ಲಾಸ್ಟಿಕ್ ಬಳಸದೆ ಪರಿಸರ ಉಳಿಸಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*