ಮಂಗಳವಾರ ಇಳಿಸಂಜೆ ಕಲ್ಲಡ್ಕದಲ್ಲಿ ನಡೆದ ಕೊಲೆಯತ್ನ ಘಟನೆ ಸಂಬಂಧಿಸಿ ಹಲವರ ವಿಚಾರಣೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ. ಆದರೆ ಘಟನೆ ಬಳಿಕ ಬಸ್ಸಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬುಧವಾರ ಕಲ್ಲಡ್ಕ ಸಹಜಸ್ಥಿತಿಗೆ ಮರಳಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ವ್ಯಾಪಾರ, ವಹಿವಾಟುಗಳು ನಿರಾತಂಕವಾಗಿ ಸಾಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹಗಲು ರಾತ್ರಿ ಕಾವಲು ಕಾಯುತ್ತಿದ್ದು, ಖುದ್ದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಂಗಳವಾರ ವೀರಕಂಭ ನಿವಾಸಿ ಕೇಶವ ಎಂಬಾತನ ಕೊಲೆಯತ್ನಕ್ಕೆ ಸಂಬಂಧಿಸಿ ಆರೋಪಿಗಳಿಗೆ ತೀವ್ರ ಶೋಧ ನಡೆಯುತ್ತಿದೆ. ಈ ಸಂಬಂಧ ಹಲವರ ವಿಚಾರಣೆಯೂ ನಡೆಯುತ್ತಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…