ಬಿಐಟಿ ಹಾಗೂ ಬೀಡ್ಸ್ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಸಿ.ಇ.ಟಿ ಅಣುಕು ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸ್ ಮಾರ್ಗದರ್ಶನ ಕಾರ್ಯಾಗಾರ ಬಂಟ್ವಾಳ ತಾಲ್ಲೂಕಿನ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಬಿಐಟಿ ಕಾಲೇಜಿನ ಪ್ರಾಂಶುಪಾಲ ಡಾ ಎ.ಜೆ ಆಂತೋನಿ ಅವರು ಮಾರ್ಗದರ್ಶನದಲ್ಲಿ ನಡೆಯಿತು. ಪ್ರಾಧ್ಯಾಪಕರಾದ ಇಮ್ರಾನ್ ಯು.ಎ, ಮುಸ್ತಫಾ ಖಲೀಲ್ ವಿಟ್ಲ, ಸುಶಾಂತ್ ಕೆ.ಜೆ, ಹಾಗೂ ನಿತಿನ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರಶಸ್ತಿಯನ್ನು ವಿತರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಎ.ಟಿ ಗಿರೀಶ್ಚಂದ್ರ, ಉಪಪ್ರಾಂಶುಪಾಲ ಸುರೇಶ್ ಅಡಿಗ, ಪ್ರೋ ರವಿಚಂದ್ರ ಮಯ್ಯ ಹಾಗೂ ಮೇದಪ್ಪ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…