ಬಂಟ್ವಾಳ

ಯುವವಾಹಿನಿ ಆಶ್ರಯದಲ್ಲಿ ರಾಷ್ಟ್ರೀಯ ಕಾರ್ಯಾಗಾರ ಅನ್ವೇಷಣಾ

ಯುವ ಮನಸ್ಸುಗಳಿಗೆ ಸೂಕ್ತ ರೀತಿಯತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯಪಟ್ಟರು.

ಜಾಹೀರಾತು

ಅವರು ಪಾಣೆಮಂಗಳೂರು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿಯುವವಾಹಿನಿ(ರಿ) ಕೇಂದ್ರ ಸಮಿತಿಯಆಶ್ರಯದಲ್ಲಿ ಹಾಗೂ ಯುವವಾಹಿನಿ(ರಿ) ಬಂಟ್ವಾಳ ತಾಲೂಕುಘಟಕದಆತಿಥ್ಯದಲ್ಲಿ ನಡೆದಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ, ವೃತ್ತಿಮಾರ್ಗದರ್ಶನ ತರಬೇತಿಯ ರಾಷ್ಟ್ರೀಯ ಕಾರ್ಯಾಗಾರ ಅನ್ವೇಷಣಾ ೨೦೧೭*ನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಜಿಲ್ಲಾ ಸಂಯೋಜಕ ಡಾ. ಗೀತಪ್ರಕಾಶ್, ಬಂಟ್ವಾಳ ರೋಟರಿ ಕ್ಲಬ್‌ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಗೌರವ ಪ್ರಧಾನ ಕಾರ್ಯದರ್ಶಿ ಬಿ. ತಮ್ಮಯ, ಜಿಲ್ಲಾ ಕೆ.ಡಿ.ಪಿ ಸದಸ್ಯೆ ಜಯಂತಿ ವಿ ಪೂಜಾರಿ, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲಿಯಾನ್, ಎಸ್.ಕೆ ಬಿಲ್ಡರ್ಸ್ ಮಂಗಳೂರಿನ ಸಂತೋಷ್ ಕುಮಾರ್ ಕೊಟ್ಟಿಂಜ ಭಾಗವಹಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು.

ಯುವವಾಹಿನಿ ಕೇಂದ್ತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಕಾರ್ಯಾಗಾರದ ಸಂಪೂರ್ಣ ಪ್ರಯೋಜನ ಪಡೆದುಕೊಂಡಾಗ ಮಾತ್ರ ಈ ಕಾರ್ಯಾಗಾರ ಯಶಸ್ವಿಯಾಗುತ್ತದೆ ಎಂದರು.

ಯುವವಾಹಿನಿ(ರಿ) ಬಂಟ್ವಾಳ ಘಟಕದ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು , ವಿದ್ಯಾರ್ಥಿಸಂಘಟನಾ ನಿರ್ದೇಶಕರಾದ ಜಯಶ್ರೀ ಕರ್ಕೇರ, ಸುಲತಾ, ಕೀರ್ತನಾ, ರಚನಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕು.ಸಹನಾ ಪ್ರಾರ್ಥಿಸಿದರು. ಅನ್ವೇಷಣಾ  ಕಾರ್ಯಾಗಾರದ ಸಂಯೋಜಕ ಚೇತನ್‌ಎಂ., ಸ್ವಾಗತಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಬೃಜೇಶ್‌ಕುಮಾರ್ ವಂದಿಸಿದರು.
ಯುವವಾಹಿನಿ(ರಿ) ಬಂಟ್ವಾಳ ಘಟಕದ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಆರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

21 hours ago