ಬಂಟ್ವಾಳ

ರತ್ನಾಕರ ಶೆಟ್ಟಿ ಗಡೀಪಾರು ಹಿಂಪಡೆಯಲು ಹಿಂಜಾವೇ ಒತ್ತಾಯ

ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ ಗಡೀಪಾರು ಆದೇಶವನ್ನು ಹಿಂಪಡೆಯಲು ಹಿಂದೂ ಜಾಗರಣಾ ವೇದಿಕೆ ಒತ್ತಾಯಿಸಿದೆ.

ಈ ಕುರಿತು ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ಪತ್ರಿಕಾ ಹೇಳಿಕೆ ನೀಡಿದ್ದು, ವೇದಿಕೆಯ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲೆಯಿಂದ ಗಡೀಪಾರು ಮಾಡುವ ಮೂಲಕ ಸರಕಾರ ದೌರ್ಜನ್ಯದ ಪರಾಕಾಷ್ಠೆಗೆ ತಲುಪಿದೆ. ಪುತ್ತೂರಿನಲ್ಲೂ ವೇದಿಕೆ ಪ್ರಮುಖರ ಮೇಲೆ ವಿನಾ ಕಾರಣ ಮೊಕದ್ದಮೆ ದಾಖಲಿಸಲಾಗಿದ್ದು, ಈ ಕ್ರಮ ಸರಕಾರಿ ಪ್ರೇರಿತ ದಬ್ಬಾಳಿಕೆಗೆ ಸಾಕ್ಷಿ ಎಂದು ಕಾರಂತ ಹೇಳಿದ್ದಾರೆ.

ಜಾಹೀರಾತು

ಈ ಹಿನ್ನೆಲೆಯಲ್ಲಿ ವೇದಿಕೆ ಪ್ರಬಲವಾದ ಜನಾಂದೋಲನ ಕೈಗೊಳ್ಳಲಿದೆ. ಮೆರವಣಿಗೆ, ಖಂಡನಾ ಸಭೆ ಅಗತ್ಯ ಬಿದ್ದರೆ ಹರತಾಳದಂಥ ಗಂಭೀರ ಹೋರಾಟ ನಡೆಸಿ ತುಷ್ಠೀಕರಣ ನಡೆಸುವ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲಿದೆ ಎಂದು ಕಾರಂತ ಹೇಳಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ