ಬಿ.ಸಿ.ರೋಡಿನ ಸರ್ವೀಸ್ ರಸ್ತೆ ಕಾಮಗಾರಿ ಆರಂಭಗೊಂಡು ಮೂರು ತಿಂಗಳು ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳದೇ ಇರುವ ಕಾರಣ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ಕಾಮಗಾರಿ ತ್ವರಿತಗೊಳಿಸಲು ಒತ್ತಾಯಿಸಿ ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘ ಮತ್ತು ಇತರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.
ಮಂಗಳವಾರ ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ರಿಕ್ಷಾ ಚಾಲಕ ಸಂಘಟನೆಗಳು, ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ಹಾಗು ಸಾರ್ವಜನಿಕ ಬೆಂಬಲದೊಂದಿಗೆ ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡಲು ಪ್ರತಿಭಟನೆ ನಡೆಯುವುದು.
ಈ ಸಂಬಂಧ ಹಲವು ಬಾರಿ ಇಲಾಖಾಧಿಕಾರಿಗಳೊಂದಿಗೆ ಮೌಖಿಕವಾಗಿ ಮಾತನಾಡಿದರೂ ಪ್ರಯೋಜನವಾಗಿಲ್ಲ ಎಂದು ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಂ.ಪ್ರಭಾಕರ ದೈವಗುಡ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.