ಬಂಟ್ವಾಳ

6ರಂದು ನರಿಕೊಂಬಿನಲ್ಲಿ ಯಕ್ಷಾರಾಧನೆ, 7ರಂದು ಸಂಗೀತಾರಾಧನೆ

ಚಿತ್ರ: ಅಶ್ವಿತ್ ಶೆಟ್ಟಿ

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪ ನರಿಕೊಂಬು ಶ್ರೀ ಮಹಾಮ್ಮಾಯಿ ಯಕ್ಷಗಾನ ಕಲಾಕೇಂದ್ರ ಮತ್ತು ಕೀರ್ತನಾ ಸಂಗೀತ ಶಾಲೆ ವತಿಯಿಂದ ಜ.6ರಂದು ಯಕ್ಷಾರಾಧನೆ ಮತ್ತು 7ರಂದು ಸಂಗೀತಾರಾಧನೆ ಕಾರ್ಯಕ್ರಮಗಳು ನಡೆಯಲಿವೆ.

6ರಂದು ಶನಿವಾರ ನರಿಕೊಂಬು ಅಂತರ ಎಂಬಲ್ಲಿರುವ ಶ್ರೀ ಕೋದಂಡರಾಮ ಭಜನಾ ಮಂದಿರದಲ್ಲಿ ಮಧ್ಯಾಹ್ನ 5.30ರಿಂದ ನಡೆಯುವ ಯಕ್ಷಾರಾಧನೆ, ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಮತ್ತು ಮುಮ್ಮೇಳ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ.ಜಯರಾಮ ಭಟ್ ವಹಿಸುವರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ವಕೀಲರಾದ ರವಿವರ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಭಾಗವಹಿಸುವರು. ಈ ಸಂದರ್ಭ ಹಿರಿಯ ಯಕ್ಷಗಾನ ಹಿಮ್ಮೇಳ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಗುವುದು. ಚಿನ್ಮಯ ಭಟ್ ಕಲ್ಲಡ್ಕ ಅವರಿಗೆ ಯುವ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಬಳಿಕ ಯಕ್ಷಗಾನ ಬಯಲಾಟ ಸೀತಾ ಕಲ್ಯಾಣ ನಡೆಯಲಿದೆ.

ಜಾಹೀರಾತು

7ರಂದು ನರಿಕೊಂಬು ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನಡೆಯುವ ಸಂಗೀತಾರಾಧನೆಯನ್ನು ಗಾನ ನೃತ್ಯ ಅಕಾಡೆಮಿ ನಿರ್ದೇಶಕಿ ವಿದ್ಯಾಶ್ರೀ ರಾಧಾಕೃಷ್ಣ ಉದ್ಘಾಟಿಸುವರು. ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರತಿಭಾ ಪ್ರದರ್ಶನವಿರಲಿದೆ. ಬಳಿಕ ಸಂಜೆ 5.30ರಿಂದ ವಿದುಷಿ ರಾಜಶ್ರೀರಾಮ್ ಚೆನ್ನೈ ಅವರ ಕಛೇರಿ ನಡೆಯುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ