ಬಂಟ್ವಾಳ

ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ತುಳು ಎಂಟನೆಯ ಪರಿಚ್ಛೇದಕ್ಕೆ ಸೇರ್ಪಡೆ ವಿಳಂಬ

  • ತುಳು ಭಾಷೆ ಎಂಟನೆಯ ಪರಿಚ್ಛೇದಕ್ಕೆ ಸೇರ್ಪಡೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅಭಿಪ್ರಾಯ

www.bantwalnews.com

ತುಳು ಭಾಷೆ ಎಂಟನೆಯ ಪರಿಚ್ಛೇದಕ್ಕೆ ಸೇರ್ಪಡೆಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ. ನಮ್ಮಲ್ಲಿ ತುಳುವಿನ ಕುರಿತು ಪ್ರೀತಿ ಇದ್ದರೆ ಖಂಡಿತ ಇದು ಸಾಧ್ಯವಾಗುತ್ತದೆ.

ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಗುರುವಾರ ನಡೆದ ತುಳು ಭಾಷೆ ಎಂಟನೆಯ ಪರಿಚ್ಛೇದಕ್ಕೆ ಸೇರ್ಪಡೆ ಕುರಿತು ವಿಶೇಷ ಉಪನ್ಯಾಸದಲ್ಲಿ ಕೇಳಿಬಂದ ಅಭಿಪ್ರಾಯವಿದು.

ಜಾಹೀರಾತು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಭಾಷೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಒಂದು ನಾಶವಾದರೆ ಮತ್ತೊಂದು ನಾಶವಾಗುವ ಅಪಾಯವಿದೆ. ಇದನ್ನು ಎಚ್ಚರದಿಂದ ಗಮನಿಸಬೇಕು. ಮನೆಯಲ್ಲಿ ತುಳು ಭಾಷೆ ಮಾತನಾಡಬೇಕು, ಅದರ ಕುರಿತು ಕೀಳರಿಮೆ ಬೇಡ ಎಂದು ಹೇಳಿದರು.

ಜಾಹೀರಾತು

ವಿಷಯ ಮಂಡಿಸಿದ ಗೋವಾ ವಿವಿ ಪ್ರಾಧ್ಯಾಪಕ ಪ್ರೊ. ಶ್ರೀಪಾದ ಭಟ್, ರಾಜಕೀಯ ಇಚ್ಛಾಶಕ್ತಿ ತುಳು ಭಾಷೆಯ ಅಭಿವೃದ್ಧಿ ಕುರಿತು ಬೇಕು ಎಂದರು. ತುಳು ಭಾಷೆ ಎಂಟನೆಯ ಪರಿಚ್ಛೇದಕ್ಕೆ ಸೇರ್ಪಡೆ ಎಂದರೆ ಹಕ್ಕಿಗೆ ರೆಕ್ಕೆ ಕೊಟ್ಟಂತೆ. ಕೊಂಕಣಿ, ಮರಾಠಿ ಭಾಷಾ ಶಾಲೆಗಳು ಗೋವಾದಲ್ಲಿವೆ. ನಮ್ಮಲ್ಲಿ ತುಳುವನ್ನು ಭಾಷೆಯಾಗಿ ಸ್ವೀಕರಿಸಬೇಕು. ತುಳು ಮಾಧ್ಯಮ ಶಾಲೆಗಳು ಹುಟ್ಟಬೇಕು ಎಂದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಮನೋಹರ ಪ್ರಸಾದ್ ಭಾಗವಹಿಸುವರು ಎಂದು ಕೇಂದ್ರದ ಸಂಚಾಲಕ ಪ್ರೊ. ತುಕಾರಾಮ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರೊ. ಆಶಾಲತಾ ಸುವರ್ಣ ವಂದಿಸಿದರು. ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಮಣಿ ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ